ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಪಂಜಾಬ್-ಹೈದರಾಬಾದ್ ರೆಡಿ

Kannadaprabha News   | Asianet News
Published : Oct 24, 2020, 03:32 PM IST
ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಪಂಜಾಬ್-ಹೈದರಾಬಾದ್ ರೆಡಿ

ಸಾರಾಂಶ

13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 43ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ದುಬೈನ ಅಂತಾರಾಷ್ಟ್ರೀಯ ಮೈದಾನದಲ್ಲಿ ಮುಖಾಮುಖಿಯಾಗಲಿದ್ದು ಎರಡು ತಂಡಗಳ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾಗಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ದುಬೈ(ಅ.24): ಹ್ಯಾಟ್ರಿಕ್‌ ಗೆಲುವಿನೊಂದಿಗೆ ಜಯದ ಲಯಕ್ಕೆ ಮರಳಿರುವ ಕಿಂಗ್ಸ್‌ ಇಲೆವೆನ್‌ ಪಂಜಾಬ್‌, ಸನ್‌ರೈಸರ್ಸ್‌ ಹೈದ್ರಾಬಾದ್‌ ವಿರುದ್ಧ ಶನಿವಾರ ಇಲ್ಲಿ ನಡೆಯಲಿರುವ ಐಪಿಎಲ್‌ ಪಂದ್ಯದಲ್ಲಿ ಎದುರಾಗಲಿದೆ. 

ಎರಡೂ ತಂಡಗಳು ಈ ಪಂದ್ಯ ಗೆಲ್ಲಲೇಬೇಕಾದ ಒತ್ತಡದಲ್ಲಿವೆ. ತಲಾ 10ರಲ್ಲಿ 4 ಗೆಲುವು ಕಂಡಿರುವ ಉಭಯ ತಂಡಗಳು 8 ಅಂಕಗಳಿಸಿ ಕ್ರಮವಾಗಿ 5 ಹಾಗೂ 6ನೇ ಸ್ಥಾನದಲ್ಲಿವೆ. ಉಳಿದ 4 ಪಂದ್ಯಗಳು ಎರಡೂ ತಂಡಗಳಿಗೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಗೆದ್ದ ತಂಡ ಪ್ಲೇ ಆಫ್‌ ಹಾದಿಯನ್ನು ಸುಗಮಗೊಳಿಸಿಕೊಂಡರೆ, ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. 

IPL 2020: ಮುಂಬೈ ಎದುರು ಸಿಎಸ್‌ಕೆ ಮುಗ್ಗರಿಸಿದ್ದು ಹೇಗೆ?

ಅಂಕಪಟ್ಟಿಯ ಅಗ್ರಸ್ಥಾನದಲ್ಲಿರುವ ಡೆಲ್ಲಿ, ಆರ್‌ಸಿಬಿ ಹಾಗೂ ಮುಂಬೈ ವಿರುದ್ಧ ಗೆದ್ದಿರುವ ಪಂಜಾಬ್‌ ಆತ್ಮವಿಶ್ವಾಸದಲ್ಲಿದ್ದು, ಇದೀಗ ಹೈದ್ರಾಬಾದ್‌ ಎದುರು ಮತ್ತೊಂದು ಜಯದ ವಿಶ್ವಾಸದಲ್ಲಿದೆ. ಕಳೆದ ಪಂದ್ಯದಲ್ಲಿ ರಾಜಸ್ಥಾನ ವಿರುದ್ಧ ಗೆದ್ದಿರುವ ಹೈದ್ರಾಬಾದ್‌ ಜಯದ ಲಯ ಮುಂದುವರಿಸುವ ಉತ್ಸಾಹದಲ್ಲಿದೆ.

ಪಿಚ್‌ ರಿಪೋರ್ಟ್‌:

ದುಬೈ ಪಿಚ್‌ ಸಮತೋಲದಿಂದ ಕೂಡಿದ್ದು, ಆರಂಭದಲ್ಲಿ ವೇಗಿಗಳಿಗೆ ಹೆಚ್ಚು ನೆರವಾಗಲಿದೆ. ಸಮಯ ಕಳೆದಂತೆ ಸ್ಪಿನ್ನರ್‌ಗಳಿಗೂ ಸ್ಪಂದಿಸಲಿದೆ. ಟಾಸ್‌ ಪ್ರಮುಖ ಪಾತ್ರವಹಿಸಲಿದೆ.

ಸಂಭವನೀಯ ಆಟಗಾರರ ಪಟ್ಟಿ

ಪಂಜಾಬ್‌: ಕೆ.ಎಲ್. ರಾಹುಲ್‌ (ನಾಯಕ), ಮಯಾಂಕ್‌ ಅಗರ್‌ವಾಲ್, ಕ್ರಿಸ್ ಗೇಲ್‌, ನಿಕೋಲಸ್ ಪೂರನ್‌, ಗ್ಲೆನ್ ಮ್ಯಾಕ್ಸ್‌ವೆಲ್‌, ದೀಪಕ್ ಹೂಡಾ, ಜೇಮ್ಸ್ ನೀಶಮ್‌, ಮುರುಗನ್ ಅಶ್ವಿನ್‌, ಮೊಹಮ್ಮದ್ ಶಮಿ, ರವಿ ಬಿಷ್ಣೋಯಿ, ಆರ್ಶ್‌ದೀಪ್ ಸಿಂಗ್‌.

ಹೈದ್ರಾಬಾದ್‌: ಡೇವಿಡ್ ವಾರ್ನರ್‌ (ನಾಯಕ), ಜಾನಿ ಬೇರ್‌ಸ್ಟೋ, ಮನೀಶ್ ಪಾಂಡೆ‌, ವಿಜಯ್ ಶಂಕರ್‌, ಪ್ರಿಯಂ ಗರ್ಗ್‌, ಅಬ್ದುಲ್ ಸಮದ್‌, ಜೇಸನ್ ಹೋಲ್ಡರ್‌, ರಶೀದ್ ಖಾನ್‌, ಶಾಬಾಜ್ ನದೀಮ್‌, ಸಂದೀಪ್‌ ಶರ್ಮಾ, ಟಿ. ನಟರಾಜನ್‌.

ಸ್ಥಳ: ದುಬೈ
ಆರಂಭ: ರಾತ್ರಿ 7.30ಕ್ಕೆ
ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನಿಂದ ಆರ್‌ಸಿಬಿ ಮ್ಯಾಚ್ ಪುಣೆಗೆ ಶಿಫ್ಟ್ ಮಾಡಲು ಬಿಸಿಸಿಐ ಮೇಲೆ ಮಹಾರಾಷ್ಟ್ರ ಒತ್ತಡ!
ಮುಸ್ತಾಫಿಜುರ್‌ ರಹಮಾನ್ ಕೆಕೆಆರ್‌ ತಂಡದಿಂದ ಗೇಟ್‌ಪಾಸ್; ಮೊದಲ ಸಲ ಮೌನ ಮುರಿದ ಬಾಂಗ್ಲಾದೇಶ ವೇಗಿ!