
ದುಬೈ(ಅ.18): ಮುಂಬೈ ಇಂಡಿಯನ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಪಂದ್ಯ ಟೈ ಆಗಿದೆ.
ಗೆಲುವಿಗೆ 177ರನ್ ಟಾರ್ಗೆಟ್ ಪೆಡೆದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಎಂದಿನ ಆರಂಭ ಸಿಗಲಿಲ್ಲ. ಈ ಬಾರಿ ಮಯಾಂಕ್ ಅಗರ್ವಾಲ್ 11 ರನ್ ಸಿಡಿಸಿ ನಿರ್ಗಮಿಸಿದರು. ಆದರೆ ನಾಯಕ ಕೆಎಲ್ ರಾಹುಲ್ ಹಾಗೂ ಕ್ರಿಸ್ ಜೊತೆಯಾಟದಿಂದ ಚೇತರಿಸಿಕೊಂಡಿತು.
ಕ್ರಿಸ್ ಗೇಲ್ 24 ರನ್ ಸಿಡಿಸಿ ಔಟಾದರು. ನಿಕೊಲಸ್ ಪೂರನ್ ಜೊತೆ ಹೋರಾಟ ಮುಂದುವರಿಸಿದ ರಾಹುಲ್, ಮುಂಬೈ ಬೌಲರ್ಗಳಿಗೆ ದಿಟ್ಟ ಉತ್ತರ ನೀಡಿದರು. ಇವರಿಬ್ಬರ ಜೊತೆಯಾಟದಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ಚೇತರಿಸಿಕೊಂಡಿತು. ಪೂರನ್ 24 ರನ್ ಸಿಡಿಸಿ ಔಟಾದರು.
ಗ್ಲೆನ್ ಮ್ಯಾಕ್ಸ್ವೆಲ್ ಅಬ್ಬರಿಸಲಿಲ್ಲ. ಸತತ 2 ವಿಕೆಟ್ ಕಳೆದುಕೊಂಡ ಪಂಜಾಬ್ ತಂಡದಲ್ಲಿ ಆತಂಕ ಮನೆ ಮಾಡಿತು. ಆದರೆ ಕೆಎಲ್ ರಾಹುಲ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ರಾಹುಲ್ಗೆ ದೀಪಕ್ ಹೂಡ ಸಾಥ್ ನೀಡಿದರು.
51 ಎಸೆತದಲ್ಲಿ 77 ರನ್ ಸಿಡಿಸಿದ ರಾಹುಲ್ ವಿಕೆಟ್ ಪತನದೊಂದಿಗೆ ಪಂಜಾಬ್ ಮತ್ತೆ ಅಂತಿಮ ಹಂತದಲ್ಲಿ ವಿಕೆಟ್ ಕೈಚೆಲ್ಲೋ ಚಾಳಿ ಮುಂದವರಿಸಿತು. ಪಂಜಾಬ್ ಗೆಲುವಿಗೆ ಅಂತಿಮ 12 ಎಸೆತದಲ್ಲಿ 22 ರನ್ ಅವಶ್ಯಕತೆ ಇತ್ತು. ದೀಪಕ್ ಹೂಡ ಹೋರಾಟದಿಂದ ಪಂಜಾಬ್ಗೆ ಅಂತಿಮ 6 ಎಸೆತದಲ್ಲಿ 9 ರನ್ ಬೇಕಿತ್ತು. ದೀಪಕ್ ಹೂಡ ಬೌಂಡರಿ ಸಿಡಿಸಿದರು. ಅಂತಿಮ 1 ಎಸೆತದಲ್ಲಿ 2 ರನ್ ಬೇಕಿದ್ದಾಗ 2ನೇ ಪೂರೈಸುವ ವೇಳೆ ಕ್ರಿಸ್ ಜೋರ್ಡಾನ್ ರನೌಟ್ಗೆ ಬಲಿಯಾದರು. ಪಂದ್ಯ ಟೈನಲ್ಲಿ ಅಂತ್ಯಗೊಂಡಿತು. ಇದೀಗ ಫಲಿತಾಂಶಕ್ಕಾಗಿ ಸೂಪರ್ ಓವರ್ ಆಡಬೇಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.