IPLಗೂ ಮುನ್ನ ರಾಜಸ್ಥಾನ ರಾಯಲ್ಸ್‌ಗೆ ಆಘಾತ, ಫೀಲ್ಡಿಂಗ್‌ ಕೋಚ್‌ಗೆ ಕೊರೋನಾ ಪಾಸಿಟಿವ್..!

Suvarna News   | Asianet News
Published : Aug 12, 2020, 05:45 PM IST
IPLಗೂ ಮುನ್ನ ರಾಜಸ್ಥಾನ ರಾಯಲ್ಸ್‌ಗೆ ಆಘಾತ, ಫೀಲ್ಡಿಂಗ್‌ ಕೋಚ್‌ಗೆ ಕೊರೋನಾ ಪಾಸಿಟಿವ್..!

ಸಾರಾಂಶ

ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನವೇ ಚೊಚ್ಚಲ ಆವೃತ್ತಿಯ ಚಾಂಪಿಯನ್ ರಾಜಸ್ಥಾನ ಪಾಲಿಗೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ತಂಡದ ಫೀಲ್ಡಿಂಗ್ ಕೋಚ್ ಇದೀಗ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಬೆಂಗಳೂರು(ಆ.12): ಕೊರೋನಾ ಆತಂಕದ ನಡುವೆಯೇ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಹೀಗಿರುವಾಗಲೇ ರಾಜಸ್ಥಾನ ರಾಯಲ್ಸ್ ತಂಡದ ಪಾಲಿಗೆ ಆಘಾತಕಾರಿಯಾದ ಸುದ್ದಿಯೊಂದು ಹೊರಬಿದ್ದಿದ್ದು, ತಂಡದ ಫೀಲ್ಡಿಂಗ್‌ ಕೋಚ್‌ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಹೌದು, ಬುಧವಾರ(ಆಗಸ್ಟ್ 12) ರಾಜಸ್ಥಾನ ರಾಯಲ್ಸ್ ತಂಡದ ಫೀಲ್ಡಿಂಗ್ ಕೋಚ್ ದಿಶಾಂತ್ ಯಗ್ನಿಕ್ ತಮಗೆ ಸೋಂಕು ತಗುಲಿರುವುದಾಗಿ ಟ್ವಿಟರ್‌ನಲ್ಲಿ ಖಚಿತ ಪಡಿಸಿದ್ದಾರೆ.

ನಾನು ಕೊರೋನಾ ಸೋಂಕಿಗೆ ತುತ್ತಾಗಿದ್ದೇನೆ. ಕಳೆದ 10 ದಿನಗಳ ಅವಧಿಯಲ್ಲಿ ನನ್ನ ಜತೆ ಯಾರೆಲ್ಲಾ ಸಂಪರ್ಕ ಹೊಂದಿದ್ದಾರೋ ಅವರೆಲ್ಲಾ ಒಮ್ಮೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ. ಬಿಸಿಸಿಐ ಮಾರ್ಗಸೂಚಿಯಂತೆ ಇನ್ನು 14 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರುತ್ತೇನೆ. ಆ ಬಳಿಕ ನಾನು ಎರಡು ಪರೀಕ್ಷೆಯ 2 ಫಲಿತಾಂಶಗಳು ನೆಗೆಟಿವ್ ಬಂದ ಬಳಿಕ ರಾಜಸ್ಥಾನ ರಾಯಲ್ಸ್ ತಂಡವನ್ನು ಕೂಡಿಕೊಳ್ಳುತ್ತೇನೆ. ನಿಮ್ಮ ಬೆಂಬಲ ಹಾಗೂ ಹಾರೈಕೆ ನನ್ನ ಮೇಲಿರಲಿ ಎಂದು ಟ್ವೀಟ್ ಮಾಡಿದ್ದಾರೆ.

ಮಾಸ್ಕ್‌ ಧರಿಸಿಲ್ಲವೇಕೆಂದ ಪೊಲೀಸ್‌ ಜತೆ ರವೀಂದ್ರ ಜಡೇಜಾ ಪತ್ನಿ ವಾಗ್ವಾದ

ಎಲ್ಲಾ ಎಂಟು ತಂಡಗಳು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ಹೊರಡಲು ಸಿದ್ಧತೆ ನಡೆಸುತ್ತಿವೆ. 13ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಅಬುದಾಬಿ, ದುಬೈ ಹಾಗೂ ಶಾರ್ಜಾದಲ್ಲಿ ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ನಡೆಯಲಿದೆ.

37 ವರ್ಷದ ಯಗ್ನಿಕ್ ರಾಜಸ್ಥಾನ ರಾಯಲ್ಸ್ ತಂಡದ ಮಾಜಿ ಆಟಗಾರ ಕೂಡಾ ಹೌದು. ರಾಜಸ್ಥಾನ ತಂಡದ ಪರ ಪ್ರಥಮ ದರ್ಜೆ ಕ್ರಿಕೆಟ್ ಆಡಿದ್ದರು. ಯಗ್ನಿಕ್ ಅವರಿಗೆ ಸೋಂಕು ತಗುಲಿರುವುದನ್ನು ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿ ಕೂಡಾ ಖಚಿತಪಡಿಸಿದೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈ ಸುಡುವ ಜ್ವರದ ನಡುವೆಯೂ ಆರ್‌ಸಿಬಿಗೆ ಕಪ್ ಗೆಲ್ಲಿಸಿಕೊಟ್ಟ ಕ್ಯಾಪ್ಟನ್ ಸ್ಮೃತಿ ಮಂಧನಾ! ಬ್ರೇಕ್‌ಅಪ್ ನೋವು ಮರೆಸಿದ ಫೈನಲ್ ಗೆಲುವು
WPL 2026: ಎರಡನೇ ಸಲ ಕಪ್ ಗೆಲ್ಲಿಸಿ ಮತ್ತೆ ಗುಡುಗಿದ ಸ್ಮೃತಿ ಮಂಧನಾ! ಆರ್‌ಸಿಬಿ ಫ್ಯಾನ್ಸ್ ದಿಲ್ ಖುಷ್!