
ಶಾರ್ಜಾ(ಸೆ.22): ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಜಯಭೇರಿ ಬಾರಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್ಗೆ ರಾಜಸ್ಥಾನ ರಾಯಲ್ಸ್ ವಿರುದ್ಧ ಗೆಲುವು ಸಿಗಲಿಲ್ಲ. ಬರೋಬ್ಬರಿ 217 ರನ್ ಟಾರ್ಗೆಟ್ ನೋಡಿದ CSK ತಂಡಕ್ಕೆ ರನ್ ಚೇಸ್ ಮತ್ತಷ್ಟು ಸವಾಲಾಯಿತು. ಬೃಹತ್ ಟಾರ್ಗೆಟ್ ನೀಡಿದ ಬಳಿಕ ಬೌಲಿಂಗ್ನಲ್ಲೂ ರಾಜಸ್ಥಾನ ಮಿಂಚಿನ ಪ್ರದರ್ಶನ ನೀಡಿತು.
ಶೇನ್ ವ್ಯಾಟ್ಸ್ನ್ ಹಾಗೂ ಮುರಳಿ ವಿಜಯ್ ಡೀಸೆಂಟ್ ಆರಂಭ ನೀಡಿದರು. ಆದರೆ ಸ್ಟ್ರೈಕ್ ರೇಟ್ ರನ್ ಚೇಸ್ಗೆ ಸರಿಯಾಗಿ ಇರಲಿಲ್ಲ. ಶೇನ್ ವ್ಯಾಟ್ಸನ್ 33 ರನ್ ಸಿಡಿಸಿ ಔಟಾದರೆ, ಮುರಳಿ ವಿಜಯ್ 21 ರನ್ ಸಿಡಿಸಿ ನಿರ್ಗಮಿಸಿದರು. ಫಾಪ್ ಡುಪ್ಲೆಸಿಸ್ ಹಾಗೂ ಸ್ಯಾಮ್ ಕುರನ್ ಜೊತೆಯಾಟದ ಮೇಲೆ ಹೆಚ್ಚಿನ ನಿರೀಕ್ಷೆ ಇಡಲಾಯಿತು. ಕುರನ್ 6 ಎಸೆತದಲ್ಲಿ 17 ರನ್ ಸಿಡಿಸಿ ರನ್ ವೇಗ ಹೆಚ್ಚಿದರು.
ಇತ್ತ ಡುಪ್ಲೆಸಿಸ್ ಎಚ್ಚರಿಕೆಯ ಆಟಕ್ಕೆ ಮುಂದಾದರು. ರುತುರಾಜ್ ಗಾಯಕ್ವಾಡ್ ಅಬ್ಬರಿಸಲಿಲ್ಲ. ಕೇದಾರ್ ಜಾದವ್ 22 ರನ್ ಸಿಡಿಸಿ ನಿರ್ಗಮಿಸಿದರು. ಫಾಫ್ ಡುಪ್ಲೆಸಿಸ್ ಅಬ್ಬರ ಆರಂಭಿಸಿದಾಗ, ನಾಯಕ ಎಂ.ಎಸ್.ಧೋನಿ ಸಾಥ್ ನೀಡಿದರು. ಬೌಂಡರಿ ಸಿಕ್ಸರ್ ಮೂಲಕ ಫಾಫ್ ಡುಪ್ಲೆಸಿಸ್ 37 ಎಸೆತದಲ್ಲಿ 72 ರನ್ ಸಿಡಿಸಿದರು. ಆದರೆ ಬಿರುಸಿನ ಹೊಡೆತಕ್ಕೆ ಮುಂದಾಗಿ ಪೇವಿಲಿಯನ್ ಸೇರಿಕೊಂಡರು.
ಚೆನ್ನೈ ಗೆಲುವಿಗೆ ಅಂತಿಮ 6 ಎಸೆತದಲ್ಲಿ 38 ರನ್ ಅವಶ್ಯಕತೆ ಇತ್ತು. ಧೋನಿ ಸಿಕ್ಕ ಎಸೆತದಲ್ಲಿ ಭರ್ಜರಿ ಸಿಕ್ಸರ್ ಮೂಲಕ ಅಬ್ಬರಿಸಿದರು. ಆದರೆ ಕಾಲ ಮಿಂಚಿಹೋಗಿತ್ತು. ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿ ಧೋನಿ ಸೋಲಿನ ಅಂತರ ಕಡಿಮೆ ಮಾಡಿದರು. ಚೆನ್ನೈ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 200 ರನ್ ಸಿಡಿಸಿತು. ಧೋನಿ 17 ಎಸೆತದಲ್ಲಿ 29 ರನ್ ಸಿಡಿಸಿದರು. ಈ ಮೂಲಕ ಚೆನ್ನೈ 16 ರನ್ ಸೋಲು ಕಂಡಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.