
ದುಬೈ(ಅ.17): ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಸ್ಟೀವ್ ಸ್ಮಿತ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
"
ನಿರೀಕ್ಷೆಯಂತೆಯೇ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇನ್ನು ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದ್ದು, ಗುರುಕೀರತ್ ಮನ್ ಹಾಗೂ ಶಹಬಾಜ್ ನದೀಮ್ ತಂಡ ಕೂಡಿಕೊಂಡಿದ್ದಾರೆ. ಮೊಹಮ್ಮದ್ ಸಿರಾಜ್ ಹಾಗೂ ಶಿವಂ ದುಬೆಗೆ ವಿಶ್ರಾಂತಿ ನೀಡಲಾಗಿದೆ.
ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದುವರೆಗೂ 8 ಪಂದ್ಯಗಳನ್ನಾಡಿದ್ದು, ಈ ಪೈಕಿ 5 ಗೆಲುವು ಹಾಗೂ 3 ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದರೆ, ರಾಜಸ್ಥಾನ ರಾಯಲ್ಸ್ ತಂಡ 8 ಪಂದ್ಯಗಳನ್ನಾಡಿ 3 ಗೆಲುವು 5 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಸ್ಟೀವ್ ಸ್ಮಿತ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡ ಪ್ಲೇ ಆಫ್ ಪ್ರವೇಶದ ಕನಸನ್ನು ಜೀವಂತವಾಗಿರಿಸಿಕೊಳ್ಳಬೇಕಿದ್ದರೆ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.
ತಂಡಗಳು ಹೀಗಿವೆ:
ರಾಯಲ್ ಚಾಲೆಂಜರ್ಸ್ ಬೆಂಗಳೂರು
ರಾಜಸ್ಥಾನ ರಾಯಲ್ಸ್:
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.