
ಶಾರ್ಜಾ(ಅ.12): ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ ನೈಟ್ ರೈಡರ್ಸ್ ನಡುವಿನ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 28ನೇ ಪಂದ್ಯದಲ್ಲಿಂದು ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಬಲಿಷ್ಠ ಕೋಲ್ಕತ ನೈಟ್ ರೈಡರ್ಸ್ ತಂಡವನ್ನು ಕಟ್ಟಿಹಾಕಲು ಇನ್ನೊಬ್ಬ ವೇಗಿಯನ್ನು ಆರ್ಸಿಬಿ ಇಂದು ಕಣಕ್ಕಿಳಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಗುರುಕೀರತ್ ಮನ್ ಬದಲಿಗೆ ಮೊಹಮ್ಮದ್ ಸಿರಾಜ್ ತಂಡ ಕೂಡಿಕೊಂಡಿದ್ದಾರೆ. ಈ ಹಿಂದಿನ ಪಂದ್ಯದಲ್ಲಿ ಸಿರಾಜ್ ಮಾರಕ ಬೌಲಿಂಗ್ ದಾಳಿ ನಡೆಸಿ ಗಮನ ಸೆಳೆದಿದ್ದರು.
ಕೋಲ್ಕತ ನೈಟ್ ರೈಡರ್ಸ್ ತಂಡದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಇಂಗ್ಲೆಂಡ್ ಯುವ ಬ್ಯಾಟ್ಸ್ಮನ್ ಟಾಮ್ ಬಾಂಟನ್ ಐಪಿಎಲ್ಗೆ ಪಾದಾರ್ಪಣೆ ಮಾಡಿದ್ದಾರೆ. ಸುನಿಲ್ ನರೈನ್ ಬದಲಿಗೆ ಟಾಮ್ ಬಾಂಟನ್ ತಂಡ ಕೂಡಿಕೊಂಡಿದ್ದಾರೆ.
ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ ನೈಟ್ ರೈಡರ್ಸ್ ತಂಡಗಳು ತಲಾ 6 ಪಂದ್ಯಗಳನ್ನಾಡಿದ್ದು, 4 ಗೆಲುವು 2 ಸೋಲುಗಳೊಂದಿಗೆ 8 ಅಂಕ ಕಲೆಹಾಕಿವೆ. ರನ್ ರೇಟ್ ಆಧಾರದಲ್ಲಿ ಕೆಕೆಆರ್ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೆ, ವಿರಾಟ್ ಪಡೆ 4ನೇ ಸ್ಥಾನದಲ್ಲಿದೆ.
"
ತಂಡಗಳು ಹೀಗಿವೆ:
ರಾಯಲ್ ಚಾಲೆಂಜರ್ಸ್ ಬೆಂಗಳೂರು:
ಕೋಲ್ಕತ ನೈಟ್ ರೈಡರ್ಸ್:
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.