
ಶಾರ್ಜಾ(ಅ.12): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 28ನೇ ಲೀಗ್ ಪಂದ್ಯ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕಾರಣ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡ ಗೆಲುವಿನ ಅಲೆಯಲ್ಲಿದೆ. ಇದೀಗ ಈ ತಂಡದ ಹೋರಾಟದಲ್ಲಿ ಗೆಲುವು ಯಾರಿಗೆ ಅನ್ನೋ ಲೆಕ್ಕಾಚಾರ ನಡೆಯುತ್ತಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
RCB ತಂಡದಲ್ಲಿ 1 ಬದಲಾವಣೆ ಮಾಡಲಾಗಿದೆ. ಗುರುಕೀರತ್ ಸಿಂಗ್ ಮಾನ್ ಬದಲು, ವೇಗಿ ಮೊಹಮ್ಮದ್ ಸಿರಾಜ್ ತಂಡ ಸೇರಿಕೊಂಡಿದ್ದಾರೆ. ಕೆಕೆಆರ್ ತಂಡದಲ್ಲೂ ಬದಲಾವಣೆ ಮಾಡಲಾಗಿದೆ.ಕಳಪೆ ಫಾರ್ಮ್ನಲ್ಲಿದ್ದ ಸುನಿಲ್ ನರೈನ್ ಬದಲು ಟಾಮ್ ಬಂಟನ್ ತಂಡ ಸೇರಿಕೊಂಡಿದ್ದಾರೆ.
ಅಂಕಪಟ್ಟಿಯಲ್ಲಿ ಕೆಕೆಆರ್ 3 ಹಾಗೂ ಆರ್ಸಿಬಿ 4ನೇ ಸ್ಥಾನದಲ್ಲಿದೆ. ಕೆಕೆಆರ್ 6 ಪಂದ್ಯದಲ್ಲಿ 4 ಗೆಲುವು 2 ಸೋಲು ಕಂಡಿದೆ. ಆದರೆ ನೆಟ್ ರನ್ರೇಟ್ ಆಧಾರದಲ್ಲಿ 3ನೇ ಸ್ಥಾನದಲ್ಲಿದೆ. ಇತ್ತ ಆರ್ಸಿಬಿ ಕೂಡ 4 ಗೆಲುವು 2 ಸೋಲು ಕಂಡಿದೆ.
"
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.