
ದುಬೈ(ಅ.10): ಬೆಂಗಳೂರು vs ಚೆನ್ನೈ ನಡುವಿನ ಪ್ರತಿ ಹೋರಾಟ ಅತ್ಯಂತ ರೋಚಕವಾಗಿದೆ. ಕ್ರಿಕೆಟ್ ಮಾತ್ರವಲ್ಲ, ಇತರ ಕ್ರೀಡೆಗಳಲ್ಲೂ ಇದೇ ರೋಚಕತೆ ಇದೆ. ಇದೀಗ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
RCB ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಕ್ರಿಸ್ ಮಾರಿಸ್ ತಂಡ ಸೇರಿಕೊಂಡಿದ್ದಾರೆ. ಇನ್ನು ಗುರುಕೀರತ್ ಸಿಂಗ್ ಮಾನ್ ತಂಡ ಸೇರಿಕೊಂಡಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 5 ಪಂದ್ಯದಲ್ಲಿ 3 ಗೆಲುವು ಹಾಗೂ 2 ಸೋಲಿನೊಂದಿಗೆ 6 ಅಂಕ ಸಂಪಾದಿಸಿದೆ. ಈ ಮೂಲಕ ಅಂಕಪಟ್ಟಿಲ್ಲಿ 5ನೇ ಸ್ಥಾನದಲ್ಲಿದೆ. ಇತ್ತ ಬಲಿಷ್ಠ ತಂಡ ಚೆನ್ನೈ ಸೂಪರ್ ಕಿಂಗ್ಸ್ 6ರಲ್ಲಿ 4 ಸೋಲು ಕಂಡಿದೆ. ಈ ಮೂಲಕ 6ನೇ ಸ್ಥಾನದಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.