ಐಪಿಎಲ್ 2020: ಯುವ ಬ್ಯಾಟ್ಸ್‌ಮನ್ ಆಟಕ್ಕೆ ಮನಸೋತ ಧೋನಿ..!

Published : Oct 30, 2020, 03:08 PM IST
ಐಪಿಎಲ್ 2020: ಯುವ ಬ್ಯಾಟ್ಸ್‌ಮನ್ ಆಟಕ್ಕೆ ಮನಸೋತ ಧೋನಿ..!

ಸಾರಾಂಶ

ಕೆಕೆಆರ್ ವಿರುದ್ಧ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಯುವ ಬ್ಯಾಟ್ಸ್‌ಮನ್ ಋತುರಾಜ್ ಗಾಯಕ್ವಾಡ್ ತಮ್ಮ ಆಟದ ಮೂಲಕ ನಾಯಕ ಎಂಎಸ್ ಧೋನಿಯನ್ನು ಇಂಪ್ರೆಸ್ ಮಾಡಿದ್ದಾರೆ.

ದುಬೈ, (ಅ.30): ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಸೀನಿಯರ್ಸ್‌ಗಿಂತ ಯುವ ಬ್ಯಾಟ್ಸ್‌ಮನ್‌ಗಳೇ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. 

ನಿನ್ನೆ (ಅಕ್ಟೋಬರ್ 29) ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 49ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 6 ವಿಕೆಟ್‌ ಗೆಲುವನ್ನಾಚರಿಸಿದ್ದು, ತಂಡದ ಗೆಲುವಿಗೆ ಕಾರಣವಾದ ಯುವ ಬ್ಯಾಟ್ಸ್‌ಮನ್ ಋತುರಾಜ್ ಗಾಯಕ್ವಾಡ್ ಅವರನ್ನು ನಾಯಕ ಎಂಎಸ್ ಧೋನಿ ಶ್ಲಾಘಿಸಿದ್ದಾರೆ.

ಪಂದ್ಯದ ಬಳಿಕ ಮಾತನಾಡಿದ ಮಾಹಿ, ಟೂರ್ನಿಯ ಆರಂಭದಲ್ಲೇ ಕೋವಿಡ್-19ಗೆ ತುತ್ತಾಗಿ ಋತುರಾಜ್ ತಂಡದಿಂದ ದೂರ ಉಳಿದರು. ಚೇತರಿಸಿಕೊಳ್ಳಲು 20 ದಿನ ತೆಗೆದುಕೊಂಡರು. ಹೀಗಾಗಿ ನಮಗೆ ಅವರತ್ತ ಹೆಚ್ಚು ಗಮನ ಹರಿಸಲು ಸಾಧ್ಯವಾಗಲಿಲ್ಲ. ಆತನೊಬ್ಬ ಅದ್ಭುತ ಪ್ರತಿಭೆ. ಕೆಲವೊಮ್ಮೆ ಆಟಗಾರನನ್ನು ಅಳೆಯಲು ತಂಡ ನಿರ್ವಹಣಾ ಸಮಿತಿಗೆ ಕಷ್ಟವಾಗುತ್ತದೆ ಎಂದು ಋತುರಾಜ್ ಗಾಯಕ್ವಾಡ್ ಆಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಗುಡುಗಿದ ಸರ್‌ ಜಡೇಜಾ; ಕೆಕೆಆರ್‌ ಮಣಿಸಿ ಮುಂಬೈಗೆ ಲಾಭ ಮಾಡಿದ ಸಿಎಸ್‌ಕೆ

ಕೆಕೆಆರ್ ನೀಡಿದ್ದ ಗುರಿ ಬೆನ್ನಟ್ಟಲು ಆರಂಭಿಕನಾಗಿ ಕ್ರೀಸ್‌ಗೆ ಬಂದಿದ್ದ ಋತುರಾಜ್‌ ಗಾಯಕ್ವಾಡ್‌ 53 ಎಸೆತಗಳಲ್ಲಿ 72 ರನ್‌ಗಳನ್ನು ಸಿಡಿಸಿ ಅತ್ಯುತ್ತಮ ಪ್ರದರ್ಶನ ತೋರಿದರು. ಅಲ್ಲದೇ ತಂಡದ ಗೆಲುವಿಗೆ ಅಡಿಪಾಯ ಹಾಕಿಕೊಟ್ಟರು.

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕೋಲ್ಕತಾ ನೈಟ್ ರೈಡರ್ಸ್, ನಿಗದಿತ 20 ಓವರ್‌ಗಳಿಗೆ 5 ವಿಕೆಟ್‌ ನಷ್ಟಕ್ಕೆ 172 ರನ್‌ಗಳನ್ನು ಗಳಿಸಿತ್ತು. ಬಳಿಕ  ಚೆನ್ನೈ ಸೂಪರ್‌ ಕಿಂಗ್ಸ್ 4 ವಿಕೆಟ್‌ಗಳನ್ನು ಕಳೆದುಕೊಂಡು ಗೆಲುವು ಸಾಧಿಸಿತು. ಈ ಪಂದ್ಯದ ಗೆಲುವಿನ ಹೊರತಾಗಿಯೂ ಸಿಎಸ್‌ಕೆ 10 ಅಂಕಗಳೊಂದಿಗೆ ಪಾಯಿಂಟ್ಸ್‌ ಟೇಬಲ್‌ನಲ್ಲಿ ಕೊನೆಯ ಸ್ಥಾನ ಪಡೆಯಿತು. ಇದರಿಂದ ಪ್ಲೇ ಆಫ್ಸ್‌ನಿಂದ ಹೊರಗುಳಿಯಬೇಕಾಯ್ತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆರ್‌ಸಿಬಿ ಮ್ಯಾಚ್ ಬೆಂಗಳೂರು ಬಿಟ್ ಎಲ್ಲಿಗೂ ಶಿಫ್ಟ್ ಆಗೊಲ್ಲ! ಮಹತ್ವದ ಅಪ್‌ಡೇಟ್ಸ್‌ ಕೊಟ್ಟ ಬೆಂಗಳೂರು ಫ್ರಾಂಚೈಸಿ
ಸಂಜು ಸ್ಯಾಮ್ಸನ್ ಬ್ಯಾಟರ್‌ ಆಗಿ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಅಗತ್ಯವೇ ಇರಲಿಲ್ಲ ಎಂದ ಮಾಜಿ ಕ್ರಿಕೆಟಿಗ! ಹೀಗೆ ಹೇಳಲು ಕಾರಣವೂ ಇದೆ