
ಶಾರ್ಜಾ(ಅ.31): ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಪ್ಲೇ ಆಫ್ ಸ್ಥಾನ ಖಚಿತಪಡಿಸಿಕೊಳ್ಳುವ ತವಕ, ಇತ್ತ ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ ಪ್ಲೇ ಆಫ್ ಅವಕಾಶ ಜೀವಂತವಾಗಿಸುವ ಲೆಕ್ಕಾಚಾರ. ಹೀಗಾಗಿ ಆರ್ಸಿಬಿ ಹಾಗೂ ಹೈದರಾಬಾದ್ ನಡುವಿನ ಪಂದ್ಯ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದಿರುವ SRH ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
RCB ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಡೇಲ್ ಸ್ಟೇನ್ ಬದಲು ನವದೀಪ್ ಸೈನಿ ತಂಡ ಸೇರಿಕೊಂಡಿದ್ದಾರೆ. ಹೈದರಾಬಾದ್ ತಂಡದಲ್ಲೂ ಬದಲಾವಣೆ ಮಾಡಲಾಗಿದೆ. ವೃದ್ಧಿಮಾನ ಸಾಹ ಫಿಟ್ ಆಗಿದ್ದು, ತಂಡ ಸೇರಿಕೊಂಡಿದ್ದಾರೆ. ಹೀಗಾಗಿ ವಿಜಯ್ ಶಂಕರ್ ತಂಡದಿಂದ ಹೊರಬಿದ್ದಿದ್ದಾರೆ.
ಅಬ್ಬರಿಸಿದ ಕೊಹ್ಲಿ ಪಡೆ ಕಳೆದೆರಡು ಪಂದ್ಯದಲ್ಲಿ ಸೋಲು ಅನುಭವಿಸಿದೆ. ಇದು ತಂಡದ ಆತಂಕಕ್ಕೆ ಕಾರಣವಾಗಿದೆ. 12ರಲ್ಲಿ 7 ಗೆಲವು ದಾಖಲಿಸಿದೆ ಆರ್ಸಿಬಿ 14 ಅಂಕ ಸಂಪಾದಿಸಿದೆ. ಅಂಕಪಟ್ಟಿಯಲ್ಲಿ ಆರ್ಸಿಬಿ 2ನೇ ಸ್ಥಾನದಲ್ಲಿದೆ. ಇತ್ತ ಹೈದರಾಬಾದ್ 12ರಲ್ಲಿ 5 ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.