
ದುಬೈ(ಅ.24): ಪ್ರತಿ ಪಂದ್ಯದಲ್ಲಿ ಬ್ಯಾಟಿಂಗ್ ಮೂಲಕ ಅಬ್ಬರಿಸುತ್ತಿದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಮಹತ್ವದ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದೆ. ಸನ್ರೈಸರ್ಸ್ ಹೈದರಾಬಾದ್ ದಾಳಿಗೆ ಕುಸಿದ ಪಂಜಾಬ್ 7 ವಿಕೆಟ್ ನಷ್ಟಕ್ಕೆ 126 ರನ್ ಸಿಡಿಸಿದೆ.
ಎಂದಿನ ಜೊತೆಗಾರ ಮಯಾಂಕ್ ಅಗರ್ವಾಲ್ ಇಲ್ಲದೆ ನಾಯಕ ಕೆಎಲ್ ರಾಹುಲ್ಗೆ ಉತ್ತಮ ಆರಂಭ ನೀಡಲು ಸಾಧ್ಯವಾಗಲಿಲ್ಲ. ಮನ್ದೀಪ್ ಸಿಂಗ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಪಂಜಾಬ್ 37 ರನ್ಗೆ ಮೊದಲ ವಿಕೆಟ್ ಕಳೆದುಕೊಂಡಿತು. ಮನ್ದೀಪ್ ಸಿಂಗ್ 17 ರನ್ ಸಿಡಿಸಿ ಔಟಾದರು.
ತಂಡದಲ್ಲಿ ಹೊಸ ಚೈತನ್ಯತಂದಿದ್ದ ಕ್ರಿಸ್ ಗೇಲ್ ಕೇವಲ 20 ರನ್ ಸಿಡಿಸಿ ನಿರ್ಗಮಿಸಿದರು. ಇದರ ಬೆನ್ನಲ್ಲೇ ರಾಹುಲ್ 27 ರನ್ ಸಿಡಿಸಿ ನಿರ್ಗಮಿಸಿದರು. 66 ರನ್ಗಳಿಗೆ 3 ವಿಕೆಟ್ ಕಳೆದುಕೊಂಡ ಪಂಜಾಬ್ ತೀವ್ರ ಸಂಕಷ್ಟ ಎದುರಿಸಿತು. ನಿಕೊಲಸ್ ಪೂರನ್ ಎಚ್ಚರಿಕೆ ಬ್ಯಾಟಿಂಗ್ ಪ್ರದರ್ಶನಕ್ಕೆ ಮುಂದಾದರು. ಆದರೆ ಗ್ಲೆನ್ ಮ್ಯಾಕ್ಸ್ವೆಲ್ ಹಾಗೂ ದೀಪಕ್ ಹೂಡ ಆಸರೆಯಾಗಲಿಲ್ಲ.
ನಿಕೊಲಸ್ ಪೂರನ್ ಹೋರಾಟ ಮುಂದುವರಿಸಿದರು. ಆದರೆ ಯಾರಿಂದಲೂ ಉತ್ತಮ ಸಾಥ್ ಸಿಗಲಿಲ್ಲ. ನಿಕೋಲಸ್ ಪೂರನ್ ಅಜೇಯ 32 ರನ್ ಸಿಡಿಸಿದರು. ಈ ಮೂಲಕ ಕಿಂಗ್ಸ್ ಇಲೆವೆನ್ ಪಂಜಾಬ್ 7ವಿಕೆಟ್ ನಷ್ಟಕ್ಕೆ 126 ರನ್ ಸಿಡಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.