IPL 2020: ಮುಂಬೈ ಮಣಿಸಿ ಪ್ಲೇ ಆಫ್‌ಗೆ ಎಂಟ್ರಿಕೊಟ್ಟ SRH, ಕೆಕೆಆರ್ ಔಟ್!

Published : Nov 03, 2020, 11:01 PM IST
IPL 2020: ಮುಂಬೈ ಮಣಿಸಿ ಪ್ಲೇ ಆಫ್‌ಗೆ ಎಂಟ್ರಿಕೊಟ್ಟ SRH, ಕೆಕೆಆರ್ ಔಟ್!

ಸಾರಾಂಶ

13ನೇ ಆವೃತ್ತಿ ಐಪಿಎಲ್ ಟೂರ್ನಿಯ ಅಂತಿಮ ಲೀಗ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಗೆಲುವು ಕಂಡಿದೆ. ಈ ಮೂಲಕ ಪ್ಲೇ ಆಫ್ ಸ್ಥಾನಕ್ಕೆ ಎಂಟ್ರಿಕೊಟ್ಟಿದೆ. ಆದರೆ ಮುಂಬೈ ಗೆಲವಿಗೆ ಪ್ರಾರ್ಥಿಸಿದ್ದ ಕೆಕೆಆರ್, ಟೂರ್ನಿಯಿಂದ ಹೊರಬಿದ್ದಿದೆ.  

ಶಾರ್ಜಾ(ನ.03):  ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ ಸನ್‌ರೈಸರ್ಸ್ ಹೈದರಾಬಾದ್ 13ನೇ ಆವೃತ್ತಿ ಐಪಿಎಲ್ ಟೂರ್ನಿಯ ಪ್ಲೇ ಆಫ್ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ಉತ್ತಮ ರನ್‌ರೇಟ್‌ನೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಲಗ್ಗೆ ಇಟ್ಟಿರುವ ಹೈದರಾಬಾದ್, ಪ್ಲೇ ಆಫ್ ಸುತ್ತಿನ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.

ಗೆಲುವುಗೆ 150 ರನ್ ಟಾರ್ಗೆಟ್ ಪಡೆದ ಸನ್‌ರೈಸರ್ಸ್ ಹೈದರಾಬಾದ್ ಯಾವುದೇ ಆತಂಕವಿಲ್ಲದೆ ಬ್ಯಾಟಿಂಗ್ ಪ್ರದರ್ಶನ ನೀಡಿತು. ಟೂರ್ನಿಯಲ್ಲಿ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದ್ದ  ಮುಂಬೈ ಇಂಡಿಯನ್ಸ್, ಹೈದರಾಬಾದ್ ವಿರುದ್ಧ ದುರ್ಬಲವಾಗಿ ಕಾಣಿಸಿಕೊಂಡಿತು. ನಾಯಕ ಡೇವಿಡ್ ವಾರ್ನರ್ ಹಾಗೂ ವೃದ್ಧಿಮಾನ್ ಸಾಹ ಬ್ಯಾಟಿಂಗ್, ಮುಂಬೈ ತಂಡಕ್ಕೆ ತಲೆನೋವಾಯಿತು.

ಡೇವಿಡ್ ವಾರ್ನರ್ ಹಾಗೂ ಸಾಹ ಅರ್ಧಶತಕ ಸಿಡಿಸಿ ಮಿಂಚಿದರು. ಇಷ್ಟೇ ಅಲ್ಲ ಇವರಿಬ್ಬರ ಬ್ಯಾಟಿಂಗ್‌ನಿಂದ ಹೈದರಾಬಾದ್ ಗೆಲುವಿನ ಹಾದಿ ಸುಗಮಗೊಂಡಿತು. ಮುಂಬೈ ತಂಡದ ಪ್ರಮುಖ ಬೌಲರ್‌ಗಳಿಗೆ ವಿಶ್ರಾಂತಿ ನೀಡಿದ ಕಾರಣ ಮುಂಬೈ ಪರಿಣಾಕಾರಿ ಬೌಲಿಂಗ್ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ.  ವಾರ್ನರ್ ಅಜೇಯ 85 ರನ್  ಸಿಡಿಸಿದರೆ, ಸಾಹ ಅಜೇಯ 58 ರನ್ ಸಿಡಿಸಿದರು.

ಸನ್‌ರೈಸರ್ಸ್ ಹೈದರಾಬಾದ್ 17.1 ಓವರ್‌ನಲ್ಲಿ ವಿಕೆಟ್ ನಷ್ಟವಿಲ್ಲದೇ ಭರ್ಜರಿ ಗೆಲುವು ಸಾಧಿಸಿತು. ಈ ಮೂಲಕ 14 ಅಂಕ ಹಾಗೂ ಅತ್ಯುತ್ತಮ ರನ್‌ರೇಟ್‌ನೊಂದಿಗೆ 3ನೇ ಸ್ಥಾನಕ್ಕೇರಿದೆ. ನವೆಂಬರ್ 6 ರಂದು ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ಎದುರಿಸಲಿದೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆರ್‌ಸಿಬಿ ಮ್ಯಾಚ್ ಬೆಂಗಳೂರು ಬಿಟ್ ಎಲ್ಲಿಗೂ ಶಿಫ್ಟ್ ಆಗೊಲ್ಲ! ಮಹತ್ವದ ಅಪ್‌ಡೇಟ್ಸ್‌ ಕೊಟ್ಟ ಬೆಂಗಳೂರು ಫ್ರಾಂಚೈಸಿ
ಸಂಜು ಸ್ಯಾಮ್ಸನ್ ಬ್ಯಾಟರ್‌ ಆಗಿ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಅಗತ್ಯವೇ ಇರಲಿಲ್ಲ ಎಂದ ಮಾಜಿ ಕ್ರಿಕೆಟಿಗ! ಹೀಗೆ ಹೇಳಲು ಕಾರಣವೂ ಇದೆ