
ಚೆನ್ನೈ(ಜ.20): ಎಂ.ಎಸ್.ಧೋನಿಯನ್ನು 2021ರ ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಉಳಿಸಿಕೊಳ್ಳಲಿದೆ ಎಂದು ತಂಡದ ಮಾಲಿಕ, ಐಸಿಸಿ ಮಾಜಿ ಅಧ್ಯಕ್ಷ ಎನ್.ಶ್ರೀನಿವಾಸನ್ ಸ್ಪಷ್ಟಪಡಿಸಿದ್ದಾರೆ.
ಬಿಸಿಸಿಐ ಕೇಂದ್ರ ಗುತ್ತಿಗೆ ಪಟ್ಟಿಯಿಂದ ಧೋನಿ ಹೊರಬಿದ್ದ ಹಿನ್ನೆಲೆಯಲ್ಲಿ ಅವರ ಕ್ರಿಕೆಟ್ ಭವಿಷ್ಯದ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿದ್ದವು. ಆದರೆ ಐಪಿಎಲ್ ಭವಿಷ್ಯದ ಬಗ್ಗೆ ಅಭಿಮಾನಿಗಳಲ್ಲಿ ಇರುವ ಅನುಮಾನಗಳನ್ನು ಶ್ರೀನಿವಾಸನ್ ದೂರವಾಗಿಸಿದ್ದಾರೆ.
ಟೀಂ ಇಂಡಿಯಾ ಆಯ್ಕೆಗೆ ಎಂ.ಎಸ್.ಧೋನಿ ಲಭ್ಯ; ಶೀಘ್ರದಲ್ಲೇ ಘೋಷಣೆ?
‘ಧೋನಿ ಯಾವಾಗ ನಿವೃತ್ತಿಯಾಗುತ್ತಾರೆ. ಎಷ್ಟು ದಿನ ಅವರು ಆಡುತ್ತಾರೆ ಎಂದು ಜನ ಕೇಳುತ್ತಲೇ ಇದ್ದಾರೆ. ಅವರು ಆಡುತ್ತಾರೆ, ಅದನ್ನು ನಾನು ಖಚಿತವಾಗಿ ಹೇಳಬಲ್ಲೆ. ಈ ವರ್ಷ ಖಂಡಿತವಾಗಿಯೂ ಆಡುತ್ತಾರೆ. ಮುಂದಿನ ವರ್ಷ ಧೋನಿ ಹರಾಜಿನಲ್ಲಿ ಪಾಲ್ಗೊಂಡರೂ ಅವರನ್ನು ಉಳಿಸಿಕೊಳ್ಳುತ್ತೇವೆ. ಯಾವುದೇ ಅನುಮಾನ ಬೇಡ’ ಎಂದು ಶ್ರೀನಿವಾಸನ್ ಖಾಸಗಿ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.
ಕಳೆದ ವರ್ಷ ಏಕದಿನ ವಿಶ್ವಕಪ್ ಸೆಮಿಫೈನಲ್ ಸೋಲಿನ ಬಳಿಕ ಧೋನಿ ಕ್ರಿಕೆಟ್ನಿಂದ ದೂರ ಉಳಿದಿದ್ದಾರೆ. ಸದ್ಯದಲ್ಲೇ ಅವರು ಏಕದಿನ ಕ್ರಿಕೆಟ್ಗೆ ವಿದಾಯ ಘೋಷಿಸುವ ನಿರೀಕ್ಷೆ ಇದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.