
ಮುಂಬೈ(ಮಾ.28): ಐಪಿಎಲ್ 13 ನೇ ಆವೃತ್ತಿಯ ಭವಿಷ್ಯದ ಬಗ್ಗೆ ಕುತೂಹಲ ಹೆಚ್ಚಾಗುತ್ತಿದ್ದು, ಟೂರ್ನಿ ರದ್ದಾಗಬಹುದು ಎನ್ನುವ ಸುದ್ದಿಯೂ ಇದೆ. ಈ ನಡುವೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ, ದೇಶದಲ್ಲಿ ಜನರ ಜೀವನ ಸಹಜಸ್ಥಿತಿಗೆ ಮರಳಲಿ ನಂತರ ಐಪಿಎಲ್ ಬಗ್ಗೆ ಯೋಚಿಸೋಣ ಎಂದಿದ್ದಾರೆ.
ಮನೆಯಲ್ಲಿರುವುದೇ ಕೊರೋನಾಗೆ ಮದ್ದು: ಕೊಪ್ಪಳದ ಗವಿಸಿದ್ಧೇಶ್ವರ ಶ್ರಿಗಳ ಸಂದೇಶ
‘ನಾವು ಮೊದಲು ದೇಶದ ಬಗ್ಗೆ ಯೋಚಿಸಬೇಕು. ಪರಿಸ್ಥಿತಿ ಸುಧಾರಿಸಿದರೆ, ಐಪಿಎಲ್ ಆಮೇಲೆ ನಡೆಸಬಹುದು’ ಎಂದು ಇನ್ಸ್ಟಾಗ್ರಾಂನಲ್ಲಿ ಅಭಿಮಾನಿಯೊಬ್ಬ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ. ಇನ್ನು ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾಗೆ, ಈ ಬಾರಿ ಐಪಿಎಲ್ ಟೂರ್ನಿ ಎಂದಿನಂತೆ ನಡೆಯುತ್ತದೆಯೇ ಎಂದು ಇನ್ಸ್ಟಾಗ್ರಾಂನಲ್ಲಿ ಪ್ರಶ್ನಿಸಿದ್ದಾರೆ. ರೋಹಿತ್ ಎಲ್ಲವೂ ಸಹಜ ಸ್ಥಿತಿಗೆ ಮರಳಿದರೆ, ಯಾರಿಗೆ ಗೊತ್ತು? ಐಪಿಎಲ್ ನಡೆದರೂ ನಡೆಯಬಹುದು ಎಂದು ಪ್ರತಿಕ್ರಿಯಿಸಿದ್ದಾರೆ.
13ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಮಾರ್ಚ್ 29ರಿಂದ ಆರಂಭವಾಗಬೇಕಿತ್ತು. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ಕಿಂಗ್ಸ್ ತಂಡಗಳು ಮುಖಾಮುಖಿಯಾಗಬೇಕಿತ್ತು. ಆದರೆ ಕೊರೋನಾ ವೈರಸ್ ಭೀತಿಯಿಂದಾಗಿ ಏಪ್ರಿಲ್ 15ಕ್ಕೆ ಮುಂದೂಡಲಾಯಿತು, ಇದೀಗ ದೇಶವೇ ಲಾಕ್ಡೌನ್ಗೆ ಒಳಗಾಗಿರುವುದರಿಂದ ಏಪ್ರಿಲ್ 15ರಿಂದಲೂ ಐಪಿಎಲ್ ನಡೆಯುವುದು ಅನುಮಾನ ಎನಿಸಿದೆ.
ಸಾಲ ವಸೂಲಿ, ಆಸ್ತಿ ಹರಾಜಿಗೆ ಹೈಕೋರ್ ತಡೆ
ಭಾರತದಲ್ಲಿ ಶನಿವಾರದ ಅಂತ್ಯದ ವೇಳೆಗೆ ಒಟ್ಟು 887 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದ್ದು, 20 ಮಂದಿ ಕೊನೆಯುಸಿರೆಳೆದಿದ್ದಾರೆ. ಭಾರತ ಮಾತ್ರವಲ್ಲದೇ ಜಗತ್ತಿನಾದ್ಯಂತ ಕೊರೋನಾ
ವೈರಸ್ ತಲ್ಲಣ ಮೂಡಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.