ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ: ₹4000 ಭತ್ಯೆ!

Published : Jul 17, 2019, 07:28 PM IST
ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ: ₹4000 ಭತ್ಯೆ!

ಸಾರಾಂಶ

ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಸರ್ಕಾರಿ ವಕೀಲರು, ಜಿಲ್ಲಾ ಸರ್ಕಾರಿ ನ್ಯಾಯವಾದಿ ಜಿಲ್ಲಾ ಪ್ರಾಸಿಕ್ಯೂಟರ್) ಅಥವಾ 20 ವರ್ಷಗಳ ಅನುಭವವುಳ್ಳ ನ್ಯಾಯವಾದಿಗಳ ಹತ್ತಿರ ತರಬೇತಿಗೆ ನಿಯೋಜಿಸಲಾಗುವುದು.  

ಮೈಸೂರು (ಜು. 17):  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2019-20ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ 4 ವರ್ಷದ ಅವಧಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಮೈಸೂರು ಜಿಲ್ಲೆಯಿಂದ 10 ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಲಾಗುವುದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.4000/- ತರಬೇತಿ ಭತ್ಯೆಯನ್ನು ಮಂಜೂರು ಮಾಡಲಾಗುವುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹಿಂದುಳಿದ ವರ್ಗಗಳ ವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿರಬೇಕು, ವಾರ್ಷಿಕ ಆದಾಯ ಮಿತಿ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ.3,50,000/- ಹಾಗೂ ಪ್ರವರ್ಗ 2ಎ, 3ಎ, 3ಬಿ ಅಭ್ಯರ್ಥಿಗಳಿಗೆ ರೂ.2,50,000/-ದೊಳಗಿರಬೇಕು.

ಅಭ್ಯರ್ಥಿಗಳ ವಯೋಮಿತಿ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷದೊಳಗಿರಬೇಕು. ದಿನಾಂಕ:16.08.2019ಕ್ಕಿಂತ ಹಿಂದೆ ಮೂರು ವರ್ಷ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ಬಾರ್ ಕೌನ್ಸಿಲ್‍ನಲ್ಲಿ ನೋಂದಣಿ ಮಾಡಿಸಿರಬೇಕು.

ಉದ್ಯೋಗಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ: https://kannada.asianetnews.com/jobs

ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಸರ್ಕಾರಿ ವಕೀಲರು, ಜಿಲ್ಲಾ ಸರ್ಕಾರಿ ನ್ಯಾಯವಾದಿ ಜಿಲ್ಲಾ ಪ್ರಾಸಿಕ್ಯೂಟರ್) ಅಥವಾ 20 ವರ್ಷಗಳ ಅನುಭವವುಳ್ಳ ನ್ಯಾಯವಾದಿಗಳ ಹತ್ತಿರ ತರಬೇತಿಗೆ ನಿಯೋಜಿಸಲಾಗುವುದು.

ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಾ||ಬಾಬು ಜಗಜೀವನರಾಂ ಭವನ, ಆದಿಪಂಪ ರಸ್ತೆ, ನಾರಾಯಣ ಸ್ವಾಮಿ ಬ್ಲಾಕ್, ಪಡುವಾರಹಳ್ಳಿ ಪೂರ್ವ ಬಡಾವಣೆ ಮೈಸೂರು ರವರಿಂದ ಪಡೆÉದು ಆಗಸ್ಟ್ 16 ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:0821-2342917 ಸಂಪರ್ಕಿಸಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

PREV
click me!

Recommended Stories

ಶಿಡ್ಲಘಟ್ಟ ಪೌರಾಯುಕ್ತೆಗೆ ರೌಡಿ ದರ್ಪ ತೋರಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನಿಂದ ಕ್ಷಮೆ ಕೇಳಿಸಿದ ಸುವರ್ಣ ನ್ಯೂಸ್!
ಕೆಎಸ್‌ಸಿಸಿಎಫ್ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ, 34 ಸಹಾಯಕ ಹುದ್ದೆಗಳಿಗೆ ನೇಮಕಾತಿ!