ಕರ್ನಾಟಕ ಸರ್ಕಾರದ ಹೊಸ ಭಾಗ್ಯ! ಯುವ 'ಸಾಹಸೋದ್ಯಮಿಗಳಿಗೆ' ಪ್ರತಿ ತಿಂಗ್ಳು 25 ಸಾವಿರ ಭತ್ಯೆ!

Published : Aug 10, 2024, 08:58 PM ISTUpdated : Aug 12, 2024, 09:14 AM IST
ಕರ್ನಾಟಕ ಸರ್ಕಾರದ ಹೊಸ ಭಾಗ್ಯ! ಯುವ 'ಸಾಹಸೋದ್ಯಮಿಗಳಿಗೆ' ಪ್ರತಿ ತಿಂಗ್ಳು 25 ಸಾವಿರ ಭತ್ಯೆ!

ಸಾರಾಂಶ

ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರವು ಹೊಸ ಭಾಗ್ಯ ನೀಡಲು ಮುಂದಾಗಿದೆ. ಉದ್ಯೋಗ ಬಿಟ್ಟು ಬಂದ್ರೆ ಪ್ರತಿ ತಿಂಗ್ಳು 25 ಸಾವಿರ ಭತ್ಯೆ! ಏನಿದು ಕರ್ನಾಟಕ ಸರ್ಕಾರದ ಹೊಸ ಭಾಗ್ಯ?

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಈಗಾಗಲೇ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಸಾಧಕಬಾಧಕಗಳು ಈಗಲೂ   ಚರ್ಚೆಯಾಗುತ್ತಿವೆ. ಆದರೆ ಇದರ ನಡುವೆ  ಈಗ ಹೊಸದೊಂದು 'ಭಾಗ್ಯ'ದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಸುಳಿವು ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಮನಿಕಂಟ್ರೋಲ್ ಸ್ಟಾರ್ಟಪ್ ಕಾಂಕ್ಲೇವ್‌ನಲ್ಲಿ ಭಾಗವಹಿಸಿ ಮಾತನಾಡಿದ ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಯುವಕರಲ್ಲಿ ಉದ್ಯಮಶೀಲತೆಯನ್ನು ಪ್ರೋತ್ಸಾಹಿಸುವ ಬಗ್ಗೆ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಸ್ಟಾರ್ಟಪ್ ಪೀಡಿಯಾ ಪೋಸ್ಟ್‌ ಪ್ರಕಾರ, ಈಗಿರುವ ಉದ್ಯೋಗ ಬಿಟ್ಟು 'ಸಾಹಸೋದ್ಯಮ'ಕ್ಕೆ ಕೈಹಾಕುವವರಿಗೆ ಸರ್ಕಾರ ಪ್ರತಿ ತಿಂಗಳು 25,000 ರೂಪಾಯಿ ಭತ್ಯೆ/ವೇತನ ನೀಡಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಶೀಘ್ರದಲ್ಲೇ ಈ ಯೋಜನೆಗೆ ಚಾಲನೆ ಸಿಗಲಿದ್ದು, ದೇಶದಲ್ಲೇ ಮೊಟ್ಟ ಮೊದಲ ಪ್ರಯತ್ನ ಇದಾಗಿದೆ. ಅತಿಯಾದ ಹಣದುಬ್ಬರ/ಬೆಲೆಯೇರಿಕೆ ಯನ್ನು ಗಮನದಲ್ಲಿಟ್ಟುಕೊಂಡು, ಅಭ್ಯರ್ಥಿಗಳ ದಿನನಿತ್ಯದ ಖರ್ಚಿಗಾಗಿ ಒಂದು ವರ್ಷಗಳ ಕಾಲ 25 ಸಾವಿರ ರೂ. ಭತ್ಯೆ ನೀಡಲಾಗುವುದು ಎಂದು ಸಚಿವ ಖರ್ಗೆ ತಿಳಿಸಿದ್ದಾರೆ.

ಪದಕ ಗೆದ್ದ ನದೀಂ-ನೀರಜ್: ಹೃದಯ ಗೆದ್ದ ಅಮ್ಮಂದಿರು..!

ಸಿಎಂ ಸಿದ್ದರಾಮಯ್ಯ ಕಳೆದ ಬಜೆಟ್‌ನಲ್ಲಿ ಈ  ರಾಜೀವ್‌ ಗಾಂಧಿ ಎಂಟರ್‌ಪ್ರ್ಯೂನರ್ಶಿಪ್ ಪ್ರೋಗ್ರಾಂ (RGEP)  ಯೋಜನೆಯನ್ನು ಪ್ರಕಟಿಸಿದ್ದರು. ವಿಜ್ಞಾನ ಅಥವಾ ಇಂಜಿನಿಯರಿಂಗ್‌ ಹಿನ್ನೆಲೆ ಹೊಂದಿರುವ ಯುವ ಸಾಹಸೋದ್ಯಮಿಗಳಿಗೆ ಈ ಕಾರ್ಯಕ್ರಮ ರೂಪಿಸಲಾಗಿದ್ದು, ಅವರಿಗಾಗಿ  K-Tech ಇನ್ನೋವೇಶನ್‌ ಹಬ್‌ನಿಂದ ಮಾರ್ಗದರ್ಶನ ಹಾಗೂ ಭತ್ಯೆ ನೀಡಲಿದೆ.

ಕಳೆದ ವಿಧಾನಸಭೆ ಚುನಾವಣೆ ಮುನ್ನ ಕಾಂಗ್ರೆಸ್‌ 5 ಗ್ಯಾರಂಟಿಗಳನ್ನು ಘೋಷಿಸಿತ್ತು. ಅಧಿಕಾರಕ್ಕೆ ಬಂದ ಬಳಿಕ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿ ಹಾಗೂ ಶಕ್ತಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಗ್ಯಾರಂಟಿ ಯೋಜನೆಗಳೇ ತೆಲಂಗಾಣದಲ್ಲೂ ಕಾಂಗ್ರೆಸ್‌ ಕೈಹಿಡಿದಿದ್ದವು.  ಆದರೆ ಇನ್ನೊಂದು ಕಡೆ, ಈ ಗ್ಯಾರಂಟಿ ಯೋಜನೆಗಳು ಆಡಳಿತ, ಅನುದಾನ ಹಾಗೂ ಅಭಿವೃದ್ಧಿ ಯೋಜನೆಗಳ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಚರ್ಚೆಯೂ ನಡೆಯುತ್ತಿದೆ. 

ಯಾವುದೇ ಸಾಕ್ಷಿ ಇಲ್ಲದ ಕೇಸ್‌ನಲ್ಲಿ ಸಿಎಂಗೆ ರಾಜ್ಯಪಾಲರು ನೋಟಿಸ್ ನೀಡೋದು ಎಷ್ಟು ಸರಿ: ಸಚಿವ ಮಹದೇವಪ್ಪ ಪ್ರಶ್ನೆ

ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳಿಂದ ತತ್ತರಿಸಿ ಹೋಗಿರುವ ಬಡ - ಮಧ್ಯಮ ವರ್ಗದ ಜನರಿಗೆ ಇದರಿಂದ ಭಾರೀ ಅನುಕೂಲವಾಗಿದೆ ಎಂದು ಗ್ಯಾರಂಟಿ-ಪರ ಇರುವವರು ವಾದಿಸಿದರೆ, ಇದರಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಗ್ಯಾರಂಟಿ-ವಿರೋಧಿಗಳ ವಾದವಾಗಿದೆ.

ಇನ್ನು ಈ ಹೊಸ RGEP ಯೋಜನೆ ಯಾವಾಗ, ಹೇಗೆ ಜಾರಿಯಾಗುತ್ತದೆ? ಏನೆಲ್ಲಾ ನಿಯಮಗಳಿರುತ್ತವೆ? ಎಷ್ಟರ ಮಟ್ಟಿಗೆ ಸಫಲವಾಗಲಿದೆ?  ಎಂಬಿತ್ಯಾದಿ ಪ್ರಶ್ನೆಗಳಿಗೆ ಮುಂಬರುವ ದಿನಗಳಲ್ಲಿ ಉತ್ತರ ಸಿಗಲಿದೆ.

PREV
Read more Articles on
click me!

Recommended Stories

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ
ರೌಡಿ ಚಟುವಟಿಕೆ ಹಿನ್ನಲೆಯುಳ್ಳ ವ್ಯಕ್ತಿ ಜೊತೆಗೆ ಬರ್ತ್ ಡೇ ಪಾರ್ಟಿ: ಎಸ್‌ಐ ನಾಗರಾಜ್‌ಗೆ ಸಸ್ಪೆಂಡ್ ನೋಟೀಸ್