ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್: 6 ತಿಂಗಳಲ್ಲೇ ನೇಮಕಾತಿ ಆದೇಶ ಪತ್ರ

By Suvarna NewsFirst Published Sep 18, 2020, 6:17 PM IST
Highlights

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್ ಕೊಟ್ಟಿರುವ ಮುಖ್ಯಮಂತ್ರಿ, , ಆಯ್ಕೆಯಾದ ಅಭ್ಯರ್ಥಿಗಳಿಗೆ 6 ತಿಂಗಳ ಅವಧಿಯಲ್ಲಿ ನೇಮಕಾತಿ ಆದೇಶ ನೀಡುವಂತೆ ಸೂಚಿಸಿದ್ದಾರೆ.

ಲಖನೌ, (ಸೆ.18): ಮುಂದಿನ 3 ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಿ, ಆಯ್ಕೆಯಾದ ಅಭ್ಯರ್ಥಿಗಳಿಗೆ 6 ತಿಂಗಳ ಅವಧಿಯಲ್ಲಿ ನೇಮಕಾತಿ ಆದೇಶ ಪತ್ರಗಳನ್ನು ನೀಡುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಿರಿಯ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ. 

ಇಂದು (ಶುಕ್ರವಾರ) ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಆದಿತ್ಯನಾಥ್, ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿ ಕೇಳಿದ್ದಾರೆ. ಸುಮಾರು 3 ಲಕ್ಷ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಬೇಕು ಎಂದು ಸೂಚಿಸಿದ್ದಾರೆ 

ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ

ಇಲ್ಲಿಯವರೆಗೆ 3 ಲಕ್ಷ ನೇಮಕಾತಿಗಳನ್ನು ಮಾಡಲಾಗಿದೆ, ಅದೇ ರೀತಿ ಮುಂದಿನ ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕ ರೀತಿಯಲ್ಲಿ ಪ್ರಾರಂಭಿಸಿ, ಮುಂದಿನ ಆರು ತಿಂಗಳಲ್ಲಿ ನೇಮಕಾತಿ ಪತ್ರವನ್ನು ವಿತರಿಸಬೇಕು" ಎಂದು ಸಿಎಂ ಹೇಳಿದರು.

ಈ ಸಂಬಂಧ, ಮುಖ್ಯಮಂತ್ರಿ ಅವರು ಎಲ್ಲಾ ಆಯೋಗ ಮತ್ತು ನೇಮಕಾತಿ ಮಂಡಳಿಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಿದ್ದಾರೆ. ಈವರೆಗೆ ರಾಜ್ಯ ಪೊಲೀಸ್‌ ಇಲಾಖೆಗೆ 1.37 ಲಕ್ಷ, 50 ಸಾವಿರ ಶಿಕ್ಷಕರು ಮತ್ತು ಇತರ ಇಲಾಖೆಗಳಲ್ಲಿ ಒಂದು ಲಕ್ಷ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

click me!