Karnataka Assembly Election- 2018
ಮಾಜಿ ಬಿಜೆಪಿ ಕಾರ್ಪೋರೇಟರ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ ಎಂ ಎಚ್ ಬಳಿ ಮಾಜಿ ಕಾರ್ಪೋರೇಟರ್ ವೇದವ್ಯಾಸ್ ಭಟ್ ಎನ್ನುವವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಎರಡು ಬೈಕ್’ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ವೇದವ್ಯಾಸ್ ಭಟ್ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ.
ಬೆಂಗಳೂರು (ಮೇ. 14): ಮಾಜಿ ಬಿಜೆಪಿ ಕಾರ್ಪೋರೇಟರ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.
ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ ಎಂ ಎಚ್ ಬಳಿ ಮಾಜಿ ಕಾರ್ಪೋರೇಟರ್ ವೇದವ್ಯಾಸ್ ಭಟ್ ಎನ್ನುವವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಎರಡು ಬೈಕ್’ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ವೇದವ್ಯಾಸ್ ಭಟ್ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಇಂದು ಬೆಳಿಗ್ಗೆ ವೇದವ್ಯಾಸ ಭಟ್ ಪೇಪರ್ ಡಿಲವರಿ ಕೊಡಲು ಹೋದಾಗ ಈ ಘಟನೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರೇ ಈ ಕೆಲಸ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಸದ್ಯ ಅಭಯ್ ಆಸ್ಪತ್ರೆಯಲ್ಲಿ ವೇದವ್ಯಾಸ ಭಟ್ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.