ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಅಮಿತ್ ಶಾ
First Published May 1, 2018, 4:25 PM ISTಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯದ ಹಲವೆಡೆ ಪ್ರಚಾರ ನಡೆಸುತ್ತಿದ್ದು, ಮಲೆನಾಡಿನಲ್ಲಿ ಮತಯಾಚಿಸಿದರು. ಶೃಂಗೇರಿ ಶಾರದ ಪೀಠಕ್ಕೆ ಭೇಟಿ ನೀಡಿದ ಶಾ, ಶಾರದಾಂಬೆ ದರ್ಶನ ಪಡೆದರು. ಅಲ್ಲದೇ ಜಗದ್ಗುರುಗಳ ಆಶೀರ್ವಾದ ಪಡೆದು, ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಬಿಜೆಪಿ ಪರ ಮತಯಾಚಿಸಿದರು.