Karnataka Assembly Election- 2018

ನಾಳೆ ಬಿಜೆಪಿಗೆ ಅಗ್ನಿಪರೀಕ್ಷೆ

May 18, 2018, 1:52 PM IST

ಬೆಂಗಳೂರು (ಮೇ. 18): ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯಪಾಲರು ಬಿಜೆಪಿಗೆ ಸರಕಾರ ರಚಿಸಲು ಆಹ್ವಾನಿಸಿದ್ದನ್ನು ಪ್ರಶ್ನಿಸಿ, ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೆಟ್ಟಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಎಲ್ಲವಕ್ಕೂ ಬಹುಮತ ಸಾಬೀತುಪಡಿಸುವುದೇ ಸೂಕ್ತ ಪರಿಹಾರವೆಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಕಾಲಾವಕಾಶ ಕೋರಿದ ಬಿಜೆಪಿ ಆಗ್ರಹವನ್ನು ಕೋರ್ಟ್ ತಿರಸ್ಕರಿಸಿದೆ.

ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಬೇಕಾದರೆ ಬಿಎಸ್ ವೈ ನಾಳೆ ಬಹುಮತ ಸಾಬೀತುಪಡಿಸಬೇಕು. ಬಹುಮತ ಸಾಬೀತುಪಡಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.