Karnataka Assembly Election- 2018
Apr 30, 2018, 10:53 AM IST
ಬೆಂಗಳೂರು (ಏ. 30): ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಈ ಬಾರಿ ದಯಮಾಡಿ ನನ್ನನ್ನು ಗೆಲ್ಲಿಸಿ ಎಂದು ಕೆ.ಬಿ ಚಂದ್ರಶೇಖರ್ ಕಣ್ಣೀರು ಹರಿಸಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಪ್ರಚಾರದ ವೇಳೆ ಕಣ್ಣೀರು ಹಾಕಿದ್ದಾರೆ. ಈ ಬಾರಿ ನನಗೆ ಮತ ನೀಡಿ. ಹೊರಗಿನವರನ್ನು ಕಳಿಸಿ. ನಿಮ್ಮೂರಿನ ಮಗ ಎಂದು ನನ್ನನ್ನು ಬೆಂಬಲಿಸಿ ಎಂದು ಕಣ್ಣೀರಿಟ್ಟಿದ್ದಾರೆ.