ನಾನು ಬಾದಾಮಿಯಲ್ಲಿ ಶ್ರೀರಾಮುಲು ವಿರುದ್ಧ ಪ್ರಚಾರ ಮಾಡುವುದಿಲ್ಲ

First Published May 5, 2018, 12:06 AM IST
Highlights

ಈ ನಡುವೆ  ಶ್ರೀರಾಮುಲು ಪರ ಮೊಳಕಾಲ್ಮೂರು ಕ್ಷೇತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ರೋಡ್ ಶೋ ನಡೆಸಿದ್ದಾರೆ. ಪ್ರಚಾರದಲ್ಲಿ ಜನಾರ್ದನ್ ರೆಡ್ಡಿ ಕೂಡ ಪಾಲ್ಗೊಂಡಿದ್ದರು. ಕರ್ನಾಟಕ ವಿಧಾನ ಸಭಾ ಚುನಾವಣೆ ಸ್ಟಾರ್ ಪ್ರಚಾರಕರ ಕಣವಾಗಿ ರಂಗೇರಿದೆ. ಹಲವು ನಟರು ಮೂರು ಪಕ್ಷದ ಪರ ಈಗಾಗಲೇ ಪ್ರಚಾರದಲ್ಲಿ ನಿರತರಾಗಿದ್ದಾರೆ. 

ಬೆಂಗಳೂರು(ಮೇ.04): ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರ ಪರ ಸುದೀಪ್ ಪ್ರಚಾರ ನಡೆಸುತ್ತಾರೆ ಎಂಬ ನಿರೀಕ್ಷೆ ಹುಸಿಯಾಗಿದೆ. 
ತಾವು ಬಾದಾಮಿಯಲ್ಲಿ ಶ್ರೀರಾಮುಲು ವಿರುದ್ಧ ಪ್ರಚಾರ ಮಾಡುತ್ತೇನೆ ಎಂಬುವುದು ಸತ್ಯವಲ್ಲ. ಸುಮಾರು ವರ್ಷಗಳಿಂದ ಶ್ರೀರಾಮುಲು ಅವರು ಗೊತ್ತು. ಅವರಿಗೆ ಒಳ್ಳೆಯದಾಗಲಿ ಎಂದು ಟ್ವೀಟ್ ಮಾಡಿದ್ದಾರೆ.
ಈ ನಡುವೆ  ಶ್ರೀರಾಮುಲು ಪರ ಮೊಳಕಾಲ್ಮೂರು ಕ್ಷೇತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ರೋಡ್ ಶೋ ನಡೆಸಿದ್ದಾರೆ. ಪ್ರಚಾರದಲ್ಲಿ ಜನಾರ್ದನ್ ರೆಡ್ಡಿ ಕೂಡ ಪಾಲ್ಗೊಂಡಿದ್ದರು. ಕರ್ನಾಟಕ ವಿಧಾನ ಸಭಾ ಚುನಾವಣೆ ಸ್ಟಾರ್ ಪ್ರಚಾರಕರ ಕಣವಾಗಿ ರಂಗೇರಿದೆ. ಹಲವು ನಟರು ಮೂರು ಪಕ್ಷದ ಪರ ಈಗಾಗಲೇ ಪ್ರಚಾರದಲ್ಲಿ ನಿರತರಾಗಿದ್ದಾರೆ. ಇಂದು ಚಾಮರಾಜನಗರದಲ್ಲಿ ಮಾತಾಡಿದ್ದ ಶ್ರೀರಾಮುಲು, ಸುದೀಪ್ ನಮ್ಮ ಸಮುದಾಯದವರಾಗಿದ್ದು ನನ್ನ ಪರ ಪ್ರಚಾರ ಮಾಡಬೇಕೆಂದು ಮನವಿ ಮಾಡಿದ್ದರು. 

 

Me campaigning against sriramulu at Badhami has no truth to it.Have known him for yrs now and I wish him the best.
I feel sorry for the Channels,who have been fed with this false news.A small inquiry before airing this news,probably would have been better for all.
Mch luv always

— Kichcha Sudeepa (@KicchaSudeep)
click me!