ಕಾಂಗ್ರೆಸ್’ನವರ ಭ್ರಷ್ಟಾಚಾರಗಳನ್ನು ಬಯಲಿಗೆಳೆಯುತ್ತೇವೆ: ಶ್ರೀರಾಮುಲು

Published : May 20, 2018, 12:16 PM ISTUpdated : May 20, 2018, 01:32 PM IST
ಕಾಂಗ್ರೆಸ್’ನವರ ಭ್ರಷ್ಟಾಚಾರಗಳನ್ನು ಬಯಲಿಗೆಳೆಯುತ್ತೇವೆ: ಶ್ರೀರಾಮುಲು

ಸಾರಾಂಶ

ಬಿಜೆಪಿ 104 ಸ್ಥಾನಗಳನ್ನು ಗೆದ್ದಿದ್ದರೂ ವಿಶ್ವಾಸ ಮತ ಯಾಚನೆ ಮಾಡುವಲ್ಲಿ ಸೋತಿದ್ದೇವೆ. ಬಿಎಸ್ ವೈ ರಾಜೀನಾಮೆ ನೀಡಿದ್ದಾರೆ.   ಬಿಜೆಪಿಯನ್ನು ಸೋಲಿಸಿದ್ದೇವೆ ಎಂದು ಕಾಂಗ್ರೆಸ್, ಜೆಡಿಎಸ್ ಅಂದುಕೊಂಡಿರಬಹುದು. ಆದರೆ ಜನಾದೇಶ ನಮ್ಮ ಕಡೆಯೇ ಇದೆ ಎಂದು ಶ್ರೀರಾಮುಲು ಹೇಳಿದ್ದಾರೆ.  

ಬಳ್ಳಾರಿ (ಮೇ. 20):  ಬಿಜೆಪಿ 104 ಸ್ಥಾನಗಳನ್ನು ಗೆದ್ದಿದ್ದರೂ ವಿಶ್ವಾಸ ಮತ ಯಾಚನೆ ಮಾಡುವಲ್ಲಿ ಸೋತಿದ್ದೇವೆ. ಬಿಎಸ್ ವೈ ರಾಜೀನಾಮೆ ನೀಡಿದ್ದಾರೆ.   ಬಿಜೆಪಿಯನ್ನು ಸೋಲಿಸಿದ್ದೇವೆ ಎಂದು ಕಾಂಗ್ರೆಸ್, ಜೆಡಿಎಸ್ ಅಂದುಕೊಂಡಿರಬಹುದು. ಆದರೆ ಜನಾದೇಶ ನಮ್ಮ ಕಡೆಯೇ ಇದೆ ಎಂದು ಶ್ರೀರಾಮುಲು ಹೇಳಿದ್ದಾರೆ. 

ಬಿಜೆಪಿ ಅಧಿಕಾರಕ್ಕೆ ಬಂದ್ರೆ ನಾವೆಲ್ಲಾ  ಜೈಲಿಗೆ ಹೋಗ್ತೆವೆ ಎಂಬ ಕಾರಣಕ್ಕೆ ಕಾಂಗ್ರೆಸ್, ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ.  ಎಚ್ ಡಿಕೆಗೆ ಸಿಎಂ ಮಾಡಲು ಅನುಕೂಲ ಮಾಡಿದ್ದಾರೆ ಎಂದಿದ್ದಾರೆ.  

ನಾವು ಕಾಂಗ್ರೆಸ್’ನವರನ್ನು ಮಲಗೋಕೆ ಬಿಡಲ್ಲ. ಅವರ ಭ್ರಷ್ಟಾಚಾರ, ಅಕ್ರಮಗಳನ್ನು ಎತ್ತಿ ಹಿಡಿಯುತ್ತೇವೆ.  ದಿನದ 24 ತಾಸು ಅವರನ್ನು ಕಾಯುತ್ತೇವೆ.  ಈಗಾಗಲೇ ಒಳ ಜಗಳ ಅವರಲ್ಲಿ ಪ್ರಾರಂಭವಾಗಿದೆ. ಮಂತ್ರಿಗಿರಿಗಾಗಿ ಒಳ‌ಜಗಳ ಆರಂಭವಾಗಿದೆ. ಕುಮಾರಸ್ವಾಮಿಯನ್ನು  ಬೇಷರತ್ ಆಗಿ ಸಿಎಂ ಮಾಡಲು ಒಪ್ಪಿದ್ದಾರೆ.   ಅವರ ಭ್ರಷ್ಟಾಚಾರವನ್ನು  ಮುಚ್ಚಿ ಹಾಕಲು ಪ್ರಯತ್ನ ನಡೆಯುತ್ತಿದೆ.   ಅವರ ಅನಾಚಾರ, ಭ್ರಷ್ಟಾಚಾರವನ್ನು ಜನರ ಮುಂದೆ ಇಡುತ್ತೇವೆ ಎಂದು ಶ್ರೀರಾಮುಲು ಹೇಳಿದ್ದಾರೆ.   

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ