ಉತ್ತರ ಕನ್ನಡ: ಯಲ್ಲಾಪುರ ಬಳಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ, ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ

Published : Jan 22, 2025, 08:46 AM IST
ಉತ್ತರ ಕನ್ನಡ: ಯಲ್ಲಾಪುರ ಬಳಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ, ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ

ಸಾರಾಂಶ

ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನ ಕುಳಿತಿದ್ದರು. ವೇಗದಲ್ಲಿ ಬರುವಾಗ ಗಾಡಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.    

ಕಾರವಾರ(ಜ.22): ತರಕಾರಿ ತುಂಬಿದ ಲಾರಿಯೊಂದು ಪಲ್ಟಿಯಾದ ಪರಿಣಾಮ 10 ಜನರು ಸಾವನ್ನಪ್ಪಿ ಹಲವರಿಗೆ ಗಾಯಗಳಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ರ ಗುಳ್ಳಾಪುರ ಘಟ್ಟ ಭಾಗದಲ್ಲಿ ಇಂದು(ಬುಧವಾರ) ಬೆಳಗ್ಗೆ ನಡೆದಿದೆ.  ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 

ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನ ಕುಳಿತಿದ್ದರು. ವೇಗದಲ್ಲಿ ಬರುವಾಗ ಗಾಡಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.   ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  9 ಜನರ ಶವಗಳನ್ನ ಪೊಲೀಸರು ಹೊರತೆಗೆದಿದ್ದಾರೆ.

Bengaluru: ನೆಲಮಂಗಲದಲ್ಲಿ ಮತ್ತೊಂದು ಭೀಕರ ಅಪಘಾತ, ಚಲಿಸುತ್ತಿದ್ದ ಲಾರಿಯ ಅಡಿಗೆ ಸಿಲುಕಿದ ಕಾರು!

ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.  ಯಲ್ಲಾಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 

PREV
Read more Articles on
click me!

Recommended Stories

ಮೆಟ್ರೋ ಪ್ರಯಾಣ ದರ ಏರಿಕೆ ಕುರಿತು ಬಿಎಂಆರ್‌ಸಿಎಲ್‌ನಲ್ಲಿ ಗೊಂದಲ- ಆದಾಯ ಸಾಕಾಗ್ತಿಲ್ಲ
ಗ್ರಾಪಂ ಸದಸ್ಯರ ಆರಂಭದ 15 ತಿಂಗಳು ಅವಿಶ್ವಾಸಕ್ಕಿಲ್ಲ ಅವಕಾಶ: ಹೈಕೋರ್ಟ್ ಹೇಳಿದ್ದೇನು?