ಉತ್ತರ ಕನ್ನಡ: ಯಲ್ಲಾಪುರ ಬಳಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ, ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ

Published : Jan 22, 2025, 08:46 AM IST
ಉತ್ತರ ಕನ್ನಡ: ಯಲ್ಲಾಪುರ ಬಳಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ, ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ

ಸಾರಾಂಶ

ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನ ಕುಳಿತಿದ್ದರು. ವೇಗದಲ್ಲಿ ಬರುವಾಗ ಗಾಡಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.    

ಕಾರವಾರ(ಜ.22): ತರಕಾರಿ ತುಂಬಿದ ಲಾರಿಯೊಂದು ಪಲ್ಟಿಯಾದ ಪರಿಣಾಮ 10 ಜನರು ಸಾವನ್ನಪ್ಪಿ ಹಲವರಿಗೆ ಗಾಯಗಳಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ರ ಗುಳ್ಳಾಪುರ ಘಟ್ಟ ಭಾಗದಲ್ಲಿ ಇಂದು(ಬುಧವಾರ) ಬೆಳಗ್ಗೆ ನಡೆದಿದೆ.  ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 

ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನ ಕುಳಿತಿದ್ದರು. ವೇಗದಲ್ಲಿ ಬರುವಾಗ ಗಾಡಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.   ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  9 ಜನರ ಶವಗಳನ್ನ ಪೊಲೀಸರು ಹೊರತೆಗೆದಿದ್ದಾರೆ.

Bengaluru: ನೆಲಮಂಗಲದಲ್ಲಿ ಮತ್ತೊಂದು ಭೀಕರ ಅಪಘಾತ, ಚಲಿಸುತ್ತಿದ್ದ ಲಾರಿಯ ಅಡಿಗೆ ಸಿಲುಕಿದ ಕಾರು!

ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.  ಯಲ್ಲಾಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 

PREV
Read more Articles on
click me!

Recommended Stories

ಬೆಂಗಳೂರು ಕಾಂಟ್ರಾಕ್ಟರ್ ದರಿಯಪ್ಪನ ಅಟ್ಟಹಾಸಕ್ಕೆ ಪ್ರಾಣಕ್ಕಾಗಿ ಅಂಗಲಾಚಿ ಉಸಿರುಗಟ್ಟಿ ಜೀವಬಿಟ್ಟ ಹೆಂಡತಿ!
ದೊಡ್ಡ ಹೋಟೆಲ್ ಅದಕ್ಕಿಂತ ಸೂಪರ್ ಹೆಸರು ನೋಡಿ ಆರ್ಡರ್ ಮಾಡಿದ ಬೆಂಗಳೂರಿಗನಿಗೆ ಕೊಟ್ಟಿದ್ದು ಇದು