ಮತ್ತೆ  10 ಸಾವಿರ ಕೇಸ್, ಎಲ್ಲಿಗೆ ಹೋಗ್ತಿದೆ ಕರ್ನಾಟಕದ ಲೆಕ್ಕ!

Published : Oct 04, 2020, 11:16 PM ISTUpdated : Oct 04, 2020, 11:18 PM IST
ಮತ್ತೆ  10 ಸಾವಿರ ಕೇಸ್, ಎಲ್ಲಿಗೆ ಹೋಗ್ತಿದೆ ಕರ್ನಾಟಕದ ಲೆಕ್ಕ!

ಸಾರಾಂಶ

ಕರ್ನಾಟಕದಲ್ಲಿ ಮುಂದುವರಿದ ಕೊರೋನಾ ಆರ್ಭಟ/ ಬರೋಬ್ಬರಿ ಹತ್ತು ಸಾವಿರ ಪ್ರಕರಣ ದಾಖಲು/ ನಿಯಂತ್ರಣಕ್ಕೆ ಬರದ ಮಹಾಮಾರಿ/ ಅನ್  ಲಾಕ್ ಕೊನೆ ಹಂತಕ್ಕೆ ಸಿದ್ಧತೆ

ಬೆಂಗಳೂರು (ಅ. 04) ಅನ್ ಲಾಕ್ ಕೊನೆಯ ಹಂತಕ್ಕೆ ಕೆಲ ದಿನ ಮಾತ್ರ ಬಾಕಿ ಉಳಿದಿದೆ. ಆದರೆ ಕರ್ನಾಟಕದಲ್ಲಿ ಕೊರೋನಾ ಮಾತ್ರ ಕಂಟ್ರೋಲ್ ಗೆ ಸಿಗುವ ಯಾವ ಲಕ್ಷಣಗಳು ಕಾಣುತ್ತಿಲ್ಲ.  ಭಾನುವಾರ ಮತ್ತೆ ದಾಖಲೆಯ  10,145 ಮಂದಿಗೆ  ಕೊರೋನಾ ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 6,40,661 ತಲುಪಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ  67 ಮಂದಿ  ಸಾವು ಕಂಡಿದ್ದಾರೆ.  ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 9,286ಕ್ಕೆ ಏರಿಕೆಯಾಗಿದೆ.

ನಂದಿ ಬೆಟ್ಟಕ್ಕೆ ಹೋಗುವವರು ಎಲ್ಲ ಮರೆತರು

ಬೆಂಗಳೂರು ನಗರದಲ್ಲಿ 4,340 ಹೊಸ ಪ್ರಕರಣಗಳು ದಾಖಲಾಗಿದ್ದು ಭಾನುವಾರದ ಲೆಕ್ಕ.  ಬೆಂಗಳೂರಿನ ಸೋಂಕಿತರ ಸಂಖ್ಯೆ 2,50,040ಕ್ಕೆ ಏರಿಕೆಯಾಗಿದೆ.

ಇಂದು 7,287 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 5,15,782ಕ್ಕೆ ಏರಿಕೆಯಾಗಿದೆ. 1,15,574 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅನ್ ಲಾಕ್ ಕೊನೆಯ ಹಂತ ಅಕ್ಟೋಬರ್ 15 ಕ್ಕೆ ತೆರೆದುಕೊಳ್ಳಲಿದ್ದು ಸಿನಿಮಾ ಮಂದಿರಗಳು, ಈಜುಕೋಳ ಮತ್ತು ಕ್ರೀಡಾ ತರಬೇತಿ ಶಿಬಿರಗಳು ಆರಂಭವಾಗಲಿದೆ ಎಂದು ಈ ಹಿಂದೆಯೇ ಕೇಂದ್ರ ಸರ್ಕಾರ ತಿಳಿಸಿದೆ. 

PREV
click me!

Recommended Stories

ಸಂಸದ ಬಿ.ವೈ. ರಾಘವೇಂದ್ರ ಕಾರು ಅಪಘಾಯ; ಹಿಂಬದಿಯಿಂದ ಡಿಕ್ಕಿ ಹೊಡೆದ ವಾಹನ, ಅದೃಷ್ಟವಶಾತ್ ಸಂಸದರು ಪಾರು!
ಭದ್ರಾವತಿ ದಂಪತಿ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್, ಚಿನ್ನದ ಆಸೆಗೆ ದೊಡ್ಡಪ್ಪ-ದೊಡ್ಡಮ್ಮನನ್ನೇ ಕೊಂದ ವೈದ್ಯ!