ಚಿಕ್ಕಮಗಳೂರು: ಅಡಕೆ ತೋಟದಲ್ಲಿತ್ತು 12 ಅಡಿ ಉದ್ದದ ಹೆಬ್ಬಾವು

Published : Jul 25, 2019, 11:57 AM IST
ಚಿಕ್ಕಮಗಳೂರು: ಅಡಕೆ ತೋಟದಲ್ಲಿತ್ತು 12 ಅಡಿ ಉದ್ದದ ಹೆಬ್ಬಾವು

ಸಾರಾಂಶ

ಚಿಕ್ಕಮಗಳೂರಿನಲ್ಲಿ ಅಡಕೆ ತೋಟದಲ್ಲಿ ಕಳೆ ತೆಗೆಯುವ ವೇಳೆಯಲ್ಲಿ ಸುಮಾರು 12 ಅಡಿ ಉದ್ದದ ಹೆಬ್ಬಾವು ಪತ್ತೆಯಾಗಿದೆ. ಪತ್ತೆಯಾದ ಹೆಬ್ಬಾವು ಹಿಡಿದು ಹೆಬ್ಬೆ ಮೀಸಲು ಅರಣ್ಯಕ್ಕೆ ಬಿಡಲಾಯಿತು.

ಚಿಕ್ಕಮಗಳೂರು(ಜು.25): ಅಡಕೆ ತೋಟದಲ್ಲಿ ಕಳೆ ತೆಗೆಯುವ ವೇಳೆಯಲ್ಲಿ ಸುಮಾರು 12 ಅಡಿ ಉದ್ದದ ಹೆಬ್ಬಾವು ಪತ್ತೆಯಾಗಿದೆ.

ಎನ್‌.ಆರ್‌.ಪುರ- ಬಾಳೆಹೊನ್ನೂರು ಮಾರ್ಗದಲ್ಲಿರುವ ಗಡಿಗೇಶ್ವರ ಗ್ರಾಮದ ಸಿರಾಜುದ್ದೀನ್‌ ಎಂಬುವವವರಿಗೆ ಸೇರಿರುವ ದಾಸನಗದ್ದೆ ಎಸ್ಟೇಟ್‌ನಲ್ಲಿ ಬುಧವಾರ ಮಧ್ಯಾಹ್ನ ಪತ್ತೆಯಾದ ಹೆಬ್ಬಾವು ಹಿಡಿದು ಹೆಬ್ಬೆ ಮೀಸಲು ಅರಣ್ಯಕ್ಕೆ ಬಿಡಲಾಯಿತು.

ಚಿತ್ರದುರ್ಗ: ಬಾಳೆಕಾಯಿ ಸಿದ್ದೇಶ್ವರ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ

ಅಡಕೆ ತೋಟದಲ್ಲಿ ಬೆಳೆದಿದ್ದ ಕಳೆಯನ್ನು ಯಂತ್ರದ ಮೂಲಕ ತೆಗೆಯುವಾಗ ತೋಟದ ಮಧ್ಯದಲ್ಲಿ ಹೆಬ್ಬಾವು ಯಾವುದೋ ಪ್ರಾಣಿಯನ್ನು ನುಂಗಿ ಅದನ್ನು ಜೀರ್ಣಿಸಿಕೊಳ್ಳಲು ಒದ್ದಾಡುತ್ತಿತ್ತು. ಇದನ್ನು ಕಂಡ ತೋಟದಲ್ಲಿದ್ದ ಕಾರ್ಮಿಕರು ಉರಗ ತಜ್ಞ ಹರೀಂದ್ರ ಅವರನ್ನು ಸಂಪರ್ಕಿಸಿದರು.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸ್ಥಳಕ್ಕೆ ಆಗಮಿಸಿದ ಹರೀಂದ್ರ ಅವರು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಹಾವನ್ನು ಹಿಡಿಯುವಲ್ಲಿ ಯಶಸ್ವಿಯಾದರು. ಹಿಡಿದ ಹಾವನ್ನು ಸ್ಥಳೀಯ ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ಮಾರುತಿ ಹಾಗೂ ರಂಗನಾಥ್‌ ಅವರ ಸಮ್ಮುಖದಲ್ಲಿ ಹೆಬ್ಬೆ ಮೀಸಲು ಅರಣ್ಯದಲ್ಲಿ ಬಿಡಲಾಯಿತು.

PREV
click me!

Recommended Stories

ಸ್ಕೂಲ್ ಬಸ್ ಹರಿದು 8 ವರ್ಷದ ಬಾಲಕಿ ಸಾವು; ಚಾಲಕನ ನಿರ್ಲಕ್ಷ್ಯಕ್ಕೆ ಅಮಾಯಕ ಜೀವ ಬಲಿ
ಗೋವಾ ಮಾಲ್ ಸಮೇತ ಅರಣ್ಯದಲ್ಲಿ ಸಿಕ್ಕಿಬಿದ್ದ ವ್ಯಕ್ತಿ; ಗಾಡಿ ಹಿಡಿದ ಖಾಕಿ, ಆರೋಪಿ ಪರಾರಿ!