ಕೊರೋನಾತಂಕ: ಮಹಾರಾಷ್ಟ್ರದಿಂದ ವಿಜಯಪುರಕ್ಕೆ ಬಂದ 1348 ಮಂದಿ..!

Kannadaprabha News   | Asianet News
Published : May 16, 2020, 12:51 PM ISTUpdated : May 18, 2020, 05:20 PM IST
ಕೊರೋನಾತಂಕ: ಮಹಾರಾಷ್ಟ್ರದಿಂದ ವಿಜಯಪುರಕ್ಕೆ ಬಂದ 1348 ಮಂದಿ..!

ಸಾರಾಂಶ

ವಿಜಯಪುರ ನಗರಕ್ಕೆ ಆಗಮಿಸಿದ 1348 ಪ್ರಯಾಣಿಕರು| ಇವರಿಗೆಲ್ಲ ಆಯಾ ತಾಲೂಕಿನಲ್ಲಿ ಕ್ವಾರಂಟೈನ್‌ ಮಾಡಲು ವ್ಯವಸ್ಥೆ ಮಾಡಿದ ಜಿಲ್ಲಾಡಳಿತ| ಪ್ರಯಾಣಿಕರನ್ನು ವಿಜಯಪುರ ಜಿಲ್ಲೆಯ ಆಯಾ ತಾಲೂಕು ಕೇಂದ್ರಗಳಿಗೆ ಕರೆದೊಯ್ಯಲು 41 ಬಸ್‌ಗಳ ವ್ಯವಸ್ಥೆ|

ವಿಜಯಪುರ(ಮೇ.16): ಮಹಾರಾಷ್ಟ್ರದ ಸಿಂಧುದುರ್ಗದ ಮೂಲಕ ಒಟ್ಟು 1348 ಪ್ರಯಾಣಿಕರು ಶುಕ್ರವಾರ ವಿಜಯಪುರ ಜಿಲ್ಲೆಗೆ ಆಗಮಿಸಿದ್ದಾರೆ. ಇವರನ್ನು ನಗರದ ರೈಲ್ವೆ ನಿಲ್ದಾಣದಿಂದ ಜಿಲ್ಲೆಯ ವಿವಿಧ ಭಾಗಗಳಿಗೆ ಕಳುಹಿಸಿದ ಜಿಲ್ಲಾಡಳಿತ ಆಯಾ ತಾಲೂಕಿನಲ್ಲಿಯೇ ಕ್ವಾರಂಟೈನ್‌ ಮಾಡಲು ವ್ಯವಸ್ಥೆ ಮಾಡಿಕೊಂಡಿದೆ. 

ಈ ಎಲ್ಲ ಪ್ರಯಾಣಿಕರನ್ನು ವಿಜಯಪುರ ಜಿಲ್ಲೆಯ ಆಯಾ ತಾಲೂಕು ಕೇಂದ್ರಗಳಿಗೆ ಕರೆದೊಯ್ಯಲು 41 ಬಸ್‌ಗಳ ವ್ಯವಸ್ಥೆ ಮಾಡಿಕೊಂಡಿತ್ತು. ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಉಪಾಹಾರ, ಕುಡಿಯುವ ನೀರು, ಬಿಸ್ಕೆಟ್‌ ನೀಡಲಾಗಿದೆ. 

ಸಮುದಾಯ ಭವನ ಕೀ ಕೇಳಿದ ಪೊಲೀಸಪ್ಪನ ಕಿವಿ ಕಚ್ಚಿದ ಶಿಕ್ಷಕ!

ಈ ಎಲ್ಲ ಪ್ರಯಾಣಿಕರಿಗೆ ಆಯಾ ತಾಲೂಕು ಕೇಂದ್ರಗಳಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ಸೇರಿದಂತೆ ಆರೋಗ್ಯ ತಪಾಸಣೆಗೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾದ್ಯಂತ ಈ ಎಲ್ಲ ಪ್ರಯಾಣಿಕರ ಕ್ವಾರಂಟೈನ್‌ಗೂ ಜಿಲ್ಲಾಡಳಿತದ ವತಿಯಿಂದ ಸಕಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಸಮಿತಿಗಳನ್ನು ರಚಿಸಿಸಲಾಗಿದೆ.
 

PREV
click me!

Recommended Stories

ವಿದ್ಯಾರ್ಥಿನಿಯರ ಮೈಮುಟ್ಟಿ ಅಸಭ್ಯ ವರ್ತನೆ; ಪ್ರೌಢಶಾಲೆಗೆ ನುಗ್ಗಿ ಪ್ರಾಂಶುಪಾಲನಿಗೆ ಧರ್ಮದೇಟು ಕೊಟ್ಟ ಗ್ರಾಮಸ್ಥರು!
ಮೈಸೂರು ಏಕತಾ ಮಹಲ್‌ ವಿವಾದ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!