8ನೇ ತರಗತಿಯಲ್ಲಿ ಓದುತ್ತಿದ್ದ ತರುಣ್ಗೆ ತಲೆ ಸುತ್ತು ಕಾಣಿಸಿ ಕೊಂಡು ಕುಸಿದು ಬಿದ್ದಿದ್ದಾನೆ. ತಕ್ಷಣ ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ವಿದ್ಯಾರ್ಥಿಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿನ ವೈದ್ಯರು ರಾಯಚೂರಿಗೆ ಕರೆದೊಯ್ಯುವಂತೆ ಶಿಫಾರಸು ಮಾಡಿದ್ದಾರೆ. ವಾಹನದಲ್ಲಿ ರಾಯಚೂರಿಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ.