ವಿಜಯಪುರದಲ್ಲಿ 14,000 ಎಕರೆ ರೈತರ ಭೂಮಿ ವಕ್ಫ್‌ ಹೆಸರಿಗೆ: ಗೋವಿಂದ ಕಾರಜೋಳ

Published : Nov 05, 2024, 07:42 AM IST
ವಿಜಯಪುರದಲ್ಲಿ 14,000 ಎಕರೆ ರೈತರ ಭೂಮಿ ವಕ್ಫ್‌ ಹೆಸರಿಗೆ: ಗೋವಿಂದ ಕಾರಜೋಳ

ಸಾರಾಂಶ

ವಿಜಯಪುರ ಜಿಲ್ಲೆಯಲ್ಲಿ ವಕ್ಫ್‌ ಬೋರ್ಡ್‌ನಿಂದಾದ ಅವಾಂತರ ಕುರಿತು ಬಿಜೆಪಿಯ ಸತ್ಯಶೋಧನಾ ಸಮಿತಿ ಅಧ್ಯಕ್ಷ ಗೋವಿಂದ ಕಾರಜೋಳ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಸೋಮವಾರ ವರದಿ ಸಲ್ಲಿಸಿದ್ದಾರೆ. 

ಬಳ್ಳಾರಿ(ನ.05):  ವಿಜಯಪುರ ಜಿಲ್ಲೆಯಲ್ಲಿ ವಕ್ಫ್‌ ಬೋರ್ಡ್‌ನಿಂದಾದ ಅವಾಂತರ ಕುರಿತು ಬಿಜೆಪಿಯ ಸತ್ಯಶೋಧನಾ ಸಮಿತಿ ಅಧ್ಯಕ್ಷ ಗೋವಿಂದ ಕಾರಜೋಳ ಪಕ್ಷದ ರಾಜ್ಯಾಧ್ಯಕ್ಷರಿಗೆ ನಗರದಲ್ಲಿ ಸೋಮವಾರ ವರದಿ ಸಲ್ಲಿಸಿದ್ದಾರೆ. 

ಜಿಲ್ಲೆಯಲ್ಲಿ 14,210 ಎಕರೆ ಜಮೀನು ವಕ್ಫ್‌ ಬೋರ್ಡ್ ಹೆಸರಿನಲ್ಲಿ ಕಬಳಿಕೆಯಾಗಿದೆ ಎಂದು ಸಮಿತಿಯ ವರದಿಯಲ್ಲಿ ತಿಳಿಸಲಾಗಿದೆ. 

ವಕ್ಫ್ ಜಟಾಪಟಿಯಲ್ಲಿ ಸಿಎಂ ಮಹತ್ವದ ನಿರ್ಧಾರದ ಹಿಂದಿನ ಅಸಲಿ ರಹಸ್ಯವೇನು?

ಸಿಂದಗಿಯಲ್ಲಿ 12ನೇ ಶತಮಾನದಲ್ಲಿ ಬಸವಾದಿ ಶರಣರ ಕಾಲದಲ್ಲಿ ನಿರ್ಮಿಸಲಾದ ಮಠದ ಆಸ್ತಿ, ದೇವರ ಹಿಪ್ಪರಗಿ ತಾಲೂಕಿನ ಪಡಗನೂರು ಗ್ರಾಮದಲ್ಲಿ ಸರ್ವೆ ಸಂಖ್ಯೆ 220ರಲ್ಲಿ 57 ಎಕರೆ ಜಮೀನು, ಪಡಗನೂರು ಗ್ರಾಮದಲ್ಲಿನ ಕಾಲದ ಚಾಲುಕ್ಯರ ದೇವಸ್ಥಾನ, ವಿಜಯಪುರ ನಗರದಲ್ಲಿನ ಲೋಕೋಪಯೋಗಿ ಇಲಾಖೆಗೆ ಸೇರಿದ ಸರ್ವೆ ಸಂಖ್ಯೆ 811ರ 77 ಎಕರೆ 10 ಗುಂಟೆ ಜಾಗ, ಸೇರಿದಂತೆ ವಿಜಯಪುರ ಜಿಲ್ಲೆಯ ಎಲ್ಲ ಸಮುದಾಯಗಳ ರೈತಾಪಿ ಜನರ ಒಟ್ಟು 14,210 ಎಕರೆ ಜಮೀನನ್ನು ವಕ್ಫ್‌ ಬೋರ್ಡ್ ಹೆಸರಿನಲ್ಲಿ ಕಬಳಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

PREV
Read more Articles on
click me!

Recommended Stories

Bengaluru: ಕ್ಯಾಬ್ ಚಾಲಕನ ಮೇಲೆ ಯುವತಿ ರೇಪ್ ಆರೋಪ, ತನಿಖೆ ವೇಳೆ ಬಿಗ್ ಟ್ವಿಸ್ಟ್!
ನಮ್ಮನ್ನು ಗುಲಾಮರನ್ನಾಗಿಸಿ ಹಿಂದೂ ಧರ್ಮ ಸೃಷ್ಟಿಸಿದ್ದು ಬ್ರಾಹ್ಮಣರು: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ