ಕೊರೋನಾ ಕಾಟ: ಬೆಂಗ್ಳೂರಲ್ಲಿ 1500ರ ಗಡಿಗೆ ತಲುಪಿದ ಸೋಂಕಿತರ ಸಂಖ್ಯೆ

Kannadaprabha News   | Asianet News
Published : Mar 27, 2021, 07:38 AM ISTUpdated : Mar 27, 2021, 07:43 AM IST
ಕೊರೋನಾ ಕಾಟ: ಬೆಂಗ್ಳೂರಲ್ಲಿ 1500ರ ಗಡಿಗೆ ತಲುಪಿದ ಸೋಂಕಿತರ ಸಂಖ್ಯೆ

ಸಾರಾಂಶ

ನಗರದಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 4,24,349ಕ್ಕೆ ಏರಿಕೆ| 4,06,449ಕ್ಕೆ ತಲುಪಿದ ಗುಣಮುಖರ ಸಂಖ್ಯೆ|  ಈ ಪೈಕಿ 55 ರೋಗಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ| ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,572ಕ್ಕೆ ಏರಿಕೆ| 

ಬೆಂಗಳೂರು(ಮಾ.27): ನಗರದಲ್ಲಿ ಶನಿವಾರ 1490 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 632 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಮೂರು ಮಂದಿ ಮೃತಪಟ್ಟ ವರದಿಯಾಗಿದೆ.

ಈ ಮೂಲಕ ನಗರದಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 4,24,349ಕ್ಕೆ ಏರಿಕೆಯಾಗಿದ್ದು, ಗುಣಮುಖರ ಸಂಖ್ಯೆ 4,06,449ಕ್ಕೆ ತಲುಪಿದೆ. ಈ ಪೈಕಿ 55 ರೋಗಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರ ಸಾವಿನೊಂದಿಗೆ ಈವರೆಗೆ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,572ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ ಆರ್ಭಟ: ಇಲ್ಲಿದೆ ಮಾ.26ರ ಅಂಕಿ-ಸಂಖ್ಯೆ

9 ವಿದ್ಯಾ​ರ್ಥಿ​ಗ​ಳಿಗೆ ಕೊರೋನಾ

ಬಿಬಿಎಂಪಿಯ ಜೋಗು​ಪಾಳ್ಯ ಶಾಲೆ​ಯ​ 9 ವಿದ್ಯಾ​ರ್ಥಿ​ಗ​ಳಿಗೆ ಕೊರೊನಾ ಸೋಂಕು ದೃಢ​ಪ​ಟ್ಟಿರುವ ಹಿನ್ನೆಲೆಯಲ್ಲಿ ಪಾಲಿಕೆ ಈ ಶಾಲೆ​ಯನ್ನು ಕ್ಲಸ್ಟರ್‌ ಎಂದು ಘೋಷಿ​ಸಿದೆ. ಮುಂಜಾ​ಗ್ರತಾ ಕ್ರಮ​ವಾಗಿ ಐದು ದಿನ​ಗಳ ಕಾಲ ಶಾಲೆ​ಯ​ನ್ನು ಮುಚ್ಚ​ಲಾ​ಗಿದೆ. ಸೋಂಕಿತ ವಿದ್ಯಾರ್ಥಿಗಳನ್ನು ಎಚ್‌ಎಎಲ್‌ ಕೋವಿಡ್‌ ಆರೈಕೆ ಕೇಂದ್ರಕ್ಕೆ ದಾಖಲಿಸಲಾಗಿದೆ.

ಈ ಶಾಲೆ​ಯಲ್ಲಿ ಒಟ್ಟು 51 ಜನ ವಿದ್ಯಾ​ರ್ಥಿ​ಗಳಿದ್ದು, ಪಾಲಿ​ಕೆಯ ಆರೋ​ಗ್ಯಾ​ಧಿ​ಕಾ​ರಿ​ಗಳು ಮಾ.24ರಂದು ವಿದ್ಯಾ​ರ್ಥಿ​ಗ​ಳನ್ನು ಕೊರೋನಾ ಸೋಂಕು ಪರೀ​ಕ್ಷೆಗೆ ಒಳ​ಪ​ಡಿ​ಸಿದ್ದರು. ಇದೀಗ 9 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿರುವುದರಿಂದ ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಿ ಪರೀಕ್ಷೆಗೆ ಒಳಪಡಿಸಲು ಪಾಲಿಕೆ ಕ್ರಮ ಕೈಗೊಂಡಿದೆ.
 

PREV
click me!

Recommended Stories

ಲೀಸ್ ಹಣ ನಮಗೆ ಕೊಡಿ, ಪ್ರತಿ ತಿಂಗಳೂ ಬಾಡಿಗೆ ನಾವು ಕಟ್ಟುತ್ತೇವೆ ಎಂದು 200 ಕ್ಕೂ ಹೆಚ್ಚು ಜನರಿಗೆ ಕಂಪನಿ ಮೋಸ!
ಉ.ಪ್ರದೇಶ ಯೋಗಿ ಆದಿತ್ಯನಾಥ್‌ರಂತೆ ಕರ್ನಾಟಕದಲ್ಲಿ ನಿರ್ಮಲಾನಂದ ಸ್ವಾಮೀಜಿ ಸಿಎಂ? ನಡೆದಿದೆ ದೊಡ್ಡ ಚರ್ಚೆ, ಶ್ರೀಗಳು ಹೇಳಿದ್ದೇನು?