ವಿಷ​ಯುಕ್ತ ಅಣ​ಬೆ ತಿಂದು ಒಂದೇ ಕುಟುಂಬದ 15 ಮಂದಿ ಅಸ್ವಸ್ಥ

Published : Jul 21, 2019, 12:26 PM ISTUpdated : Jul 21, 2019, 12:53 PM IST
ವಿಷ​ಯುಕ್ತ ಅಣ​ಬೆ ತಿಂದು ಒಂದೇ ಕುಟುಂಬದ 15 ಮಂದಿ ಅಸ್ವಸ್ಥ

ಸಾರಾಂಶ

ಮಲೆನಾಡಿನಲ್ಲಿ ಮಳೆಗಾಲದಲ್ಲಿ ಅಣಬೆಗಳ ಖಾದ್ಯ ತಯಾರಿಸುವುದು ಸಾಮಾನ್ಯ. ಆದರೆ ಅಣಬೆಗಳನ್ನು ಆರಿಸುವಾಗ ಎಚ್ಚರದಿಂದಿರುವುದು ಅಗತ್ಯ. ವಿಷಯುಕ್ತ ಅಣಬೆ ತಿಂದ ಒಂದೇ ಕುಟುಂಬದ 15 ಮಂದಿ ಅಸ್ವಸ್ಥಗೊಂಡ ಘಟನೆ ತಾಲೂಕಿನ ಕೋಣಂದೂರು ಸಂತೆಹಕ್ಲು ಗ್ರಾಮ​ದಲ್ಲಿ ಶುಕ್ರ​ವಾರ ರಾತ್ರಿ ನಡೆದಿದೆ.

ತೀರ್ಥ​ಹ​ಳ್ಳಿ(ಜು.21): ವಿಷಯುಕ್ತ ಅಣಬೆ ತಿಂದ ಒಂದೇ ಕುಟುಂಬದ 15 ಮಂದಿ ಅಸ್ವಸ್ಥಗೊಂಡ ಘಟನೆ ತಾಲೂಕಿನ ಕೋಣಂದೂರು ಸಂತೆಹಕ್ಲು ಗ್ರಾಮ​ದಲ್ಲಿ ಶುಕ್ರ​ವಾರ ರಾತ್ರಿ ನಡೆದಿದೆ.

ಒಂದೇ ಕುಟುಂಬದ 15 ಮಂದಿ ಶುಕ್ರವಾರ ರಾತ್ರಿ ಮನೆಯ ಹಿಂದಿದ್ದ ಅಣಬೆ ಸಂಗ್ರ​ಹಿಸಿ ಅಡುಗೆ ಮಾಡಿ​ದ್ದಾರೆ. ರಾತ್ರಿ ಊಟದ ಬಳಿಕ 11 ಗಂಟೆ ಸಮ​ಯ​ದಲ್ಲಿ ಹೊಟ್ಟೆ​ನೋ​ವು ಹಾಗೂ ವಾಂತಿ ಸಮ​ಸ್ಯೆ​ ಕಾಣಿಸಿಕೊಂಡಿದೆ.

ಅಣಬೆಯ ಹಣೆಬರಹ ತಿಳಿದುಕೊಳ್ಳುವುದು ಹೇಗೆ?

ತಕ್ಷಣ ಗ್ರಾಮಸ್ಥರು ತುರ್ತು ಚಿಕಿ​ತ್ಸೆ​ಗಾಗಿ ತೀರ್ಥ​ಹಳ್ಳಿ ಜೆ.ಸಿ.ಆಸ್ಪ​ತ್ರೆಗೆ ದಾಖ​ಲಿ​ಸಿದ್ದಾರೆ. ಈಗ ಅವರು ಆರೋಗ್ಯವಾಗಿದ್ದು, ಭಾನುವಾರ ಡಿಸ್ಚಾರ್ಜ್‌ ಮಾಡಲಾಗುವುದು ಎಂದು ತಾಲೂಕು ವೈದ್ಯಾ​ಧಿ​ಕಾ​ರಿ​ ತಿಳಿಸಿ​ದ್ದಾರೆ.

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!