ಗುಂಡ್ಲುಪೇಟೆ: ಹೊಲದಲ್ಲಿ ಕಟಾವಿಗೆ ಬಂದಿದ್ದ 150 ಕೆ.ಜಿ. ಟೊಮೆಟೊ ಕಳವು

Published : Jul 21, 2023, 03:15 AM IST
ಗುಂಡ್ಲುಪೇಟೆ: ಹೊಲದಲ್ಲಿ ಕಟಾವಿಗೆ ಬಂದಿದ್ದ 150 ಕೆ.ಜಿ. ಟೊಮೆಟೊ ಕಳವು

ಸಾರಾಂಶ

ಈ ಬಾರಿ ಟೊಮೆಟೊ ಇಳುವರಿ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಲೆ ಗಗನಕ್ಕೇರಿದೆ. ಹೀಗಾಗಿ ಜಮೀನು ಮತ್ತು ಅಂಗಡಿಯಲ್ಲಿ ಟೊಮೆಟೊ ಕಳುವಾಗದಂತೆ ನೋಡಿಕೊಳ್ಳುವುದೇ ಸವಾಲಾಗಿ ಪರಿಣಮಿಸಿದೆ. 

ಗುಂಡ್ಲುಪೇಟೆ(ಜು.21): ಜಮೀನಿನಲ್ಲಿ ಕಟಾವಿಗೆ ಬಂದಿದ್ದ ಟೊಮೆಟೊವನ್ನು ಕೆಲವರು ಕಳವು ಮಾಡಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ವಡ್ಡನಹೊಸಹಳ್ಳಿಯಲ್ಲಿ ನಡೆದಿದೆ. 

ಸುಮಾರು 100 ರಿಂದ 150 ಕೆ.ಜಿ. ಟೊಮೆಟೊ ಕಳವಾಗಿದೆ ಎಂದು ದೂರಲಾಗಿದೆ. ಈ ಬಾರಿ ಟೊಮೆಟೊ ಇಳುವರಿ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಲೆ ಗಗನಕ್ಕೇರಿದೆ. ಹೀಗಾಗಿ ಜಮೀನು ಮತ್ತು ಅಂಗಡಿಯಲ್ಲಿ ಟೊಮೆಟೊ ಕಳುವಾಗದಂತೆ ನೋಡಿಕೊಳ್ಳುವುದೇ ಸವಾಲಾಗಿ ಪರಿಣಮಿಸಿದೆ. 

ಜನಸಾಮಾನ್ಯರಿಗೆ ಗುಡ್‌ ನ್ಯೂಸ್‌: ಕೇಂದ್ರ ಸರ್ಕಾರದಿಂದ 70 ರೂ. ಗೆ ಟೊಮ್ಯಾಟೋ ಮಾರಾಟ

ವಡ್ಡನಹೊಸಹಳ್ಳಿಯ ರೈತ ವಿಜಯ್‌ ಎಂಬುವರು ತಮ್ಮ ಜಮೀನಿನಲ್ಲಿ ಟೊಮೆಟೊ ಬೆಳೆದಿದ್ದು, ಕೆಲವೇ ದಿನಗಳಲ್ಲಿ ಕಟಾವು ಮಾಡುವುದರಲ್ಲಿದ್ದರು.ಅಷ್ಟರಲ್ಲೇ ಒಂದೂವರೆ ಎಕರೆ ಪ್ರದೇಶದಲ್ಲಿದ್ದ 100ರಿಂದ 150 ಕೆ.ಜಿ. ಟೊಮೆಟೊವನ್ನು ಕಳ್ಳರು ಕಟಾವು ಮಾಡಿ ಕದ್ದೊಯ್ದಿದ್ದಾರೆ. ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Read more Articles on
click me!

Recommended Stories

Siddaramaiah: ಅಚ್ಚೇ ದಿನ್ ಎಲ್ಲಿ, 15 ಲಕ್ಷ ಎಲ್ಲಿ? ಬಿಜೆಪಿಗೆ ಸವಾಲೆಸೆದು ತಮ್ಮ ರಾಜೀನಾಮೆ ಸತ್ಯ ಬಿಚ್ಚಿಟ್ಟ ಮಾಜಿ ಸಿಎಂ!
Gowrishankar SRG: ಕನ್ನಡದ ಅತ್ಯುತ್ತಮ ನಟ ಪ್ರಶಸ್ತಿ, 'ಕೆರೆಬೇಟೆ' ಸಿನಿಮಾ ನಾಯಕನಿಗೆ ಫಿಲ್ಮ್‌ಫೇರ್