ಲೋಪ ಎಸಗಿದ ತಹಶೀಲ್ದಾರ್ ಗೆ ಬಿತ್ತು ಭಾರಿ ದಂಡ

Kannadaprabha News   | Asianet News
Published : Dec 30, 2019, 08:10 AM IST
ಲೋಪ ಎಸಗಿದ ತಹಶೀಲ್ದಾರ್ ಗೆ ಬಿತ್ತು ಭಾರಿ ದಂಡ

ಸಾರಾಂಶ

ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಓರ್ವರಿಗೆ ಭಾರಿ ದಂಡ ವಿಧಿಸಲಾಗಿದೆ. ತಿಂಗಳ ವೇತನದಲ್ಲಿ ದಂಡದ ಮೊತ್ತ ಕಡಿತವಾಗಲಿದೆ. 

ಮದ್ದೂರು [ಡಿ.30]: ಜಮೀನು ಮಂಜೂರಾತಿ ಸಂಬಂಧ ಸಾಗುವಳಿ ಚೀಟಿ ಮತ್ತು ವಿಚಾರಣಾವಹಿ ನಕಲಿ ಪ್ರತಿ ಒದಗಿಸುವಂತೆ ಮಾಹಿತಿ ಹಕ್ಕು ಕಾಯಿದೆಯಡಿ ಅರ್ಜಿ ಸಲ್ಲಿಸಿದ ವ್ಯಕ್ತಿಗೆ ಮಾಹಿತಿ ನೀಡದೆ ಕರ್ತವ್ಯ ಲೋಪ ಎಸಗಿದ್ದ ತಹಸೀಲ್ದಾರ್ ವಿ.ಗೀತಾ ಅವರಿಗೆ ಮಾಹಿತಿ ಹಕ್ಕು ಆಯೋಗ ದಂಡ ವಿಧಿಸಿ ಆದೇಶ ನೀಡಿದೆ.

ಮದ್ದೂರು ತಾಲೂಕು ಕಚೇರಿಯಲ್ಲಿ ಈ ಹಿಂದೆ ತಹಸೀಲ್ದಾರರಾಗಿ ಕರ್ತವ್ಯ ನಿರ್ವಹಿಸಿದ ಬಳಿಕ ಹೊಸಕೋಟೆ ತಹಸೀಲ್ದಾರರಾಗಿ ಕಾರ್ಯ ನಿರ್ವಹಿಸುತ್ತಿರುವ ವಿ.ಗೀತಾ ಅವರಿಗೆ ಆಯೋಗ 15 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಗೀತಾರವರ ಪ್ರತಿ ತಿಂಗಳ ವೇತನದಲ್ಲಿ 5 ಸಾವಿರದಂತೆ ಮೂರು ತಿಂಗಳು ಕಡಿತ ಮಾಡಿ ಸರ್ಕಾರದ ಲೆಕ್ಕ ಶೀರ್ಷಿಕೆಗೆ ಜಮಾ ಮಾಡುವಂತೆ ಮಾಹಿತಿ ಹಕ್ಕು ಆಯೋಗ ಸೂಚನೆ ನೀಡಿದೆ.

ತಾಲೂಕಿನ ಮಾರಸಿಂಗನಹಳ್ಳಿಯ ಕೆಂಚೇಗೌಡರ ಪುತ್ರ ದೇವೇಗೌಡರ ಸರ್ವೆ ನಂ. 125/ಸಿಯಲ್ಲಿ 1.11 ಎಕರೆ ಜಮೀನು ಮಂಜೂರು ಮಾಡಲಾಗಿತ್ತು. ಈ ಸಂಬಂಧ ಗ್ರಾಮದ ಶಿವರಾಮು ಎಂಬುವರು ಸಾಗುವಳಿ ಚೀಟಿ ಹಾಗೂ ವಿಚಾರಣಾವಹಿ ನಕಲು ಪ್ರತಿ ಒದಗಿಸುವಂತೆ ಮಾಹಿತಿ ಹಕ್ಕು ಕಾಯಿದೆಯಡಿ 2017ರ ಜೂ. 27ರಂದು ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಿದ್ದರು.ಸಾರ್ವಜನಿಕ ಮಾಹಿತಿಯ ಅಧಿಕಾರಿ ಯಾದ ತಹಸೀಲ್ದಾರ್ ವಿ. ಗೀತಾ, ಶಿವರಾಮು ಅವರಿಗೆ ಯಾವುದೇ ಮಾಹಿತಿ ನೀಡದೆ ಕರ್ತವ್ಯ ಲೋಪ ಎಸಗಿದ್ದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಈ ಸಂಬಂಧ ಅರ್ಜಿದಾರ ಶಿವರಾಮು ತಹಸೀಲ್ದಾರ್ ವಿ. ಗೀತಾ ವಿರುದ್ಧ ಮಾಹಿತಿ ಹಕ್ಕು ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ಕುರಿತು ಆಯೋಗದ ಆಯುಕ್ತ ಎಸ್.ಎಸ್. ಪಾಟೀಲ್ ವಿಚಾರಣೆ ನಡೆಸಿದ್ದರು. ಮುಂದಿನ 2019 ಜನ ವರಿ 1, ಮೇ. 3,ಜುಲೈ 16, ಆಗಸ್ಟ್ 19ರ ದಿನಾಂಕದೊಳಗೆಮಾಹಿತಿ ನೀಡುವಂತೆ ಮೂರು ಬಾರಿ ಗಡುವು ನೀಡಿ ಪ್ರತಿವಾದಿಯಾದ ತಹಸೀಲ್ದಾರ್ ಗೀತಾ ಅವರಿಗೆ ಸೂಚನೆ ನೀಡಿದ್ದರು. ಆಯೋಗದ ಎದುರು ಖುದ್ದಾಗಿ ಹಾಜರಾಗದೆ, ಸಮಜಾಯಿಷಿಯೂ ನೀಡದ ಕಾರಣ ಆಯೋಗದ ಎದುರು ಗೈರು ಹಾಜರಾಗಿ ಆದೇಶವನ್ನು ಧಿಕ್ಕರಿಸಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಆಯೋಗದ ಆಯುಕ್ತ ಎಸ್.ಎಸ್. ಪಾಟೀಲ್ ತಹಸೀಲ್ದಾರ್ ಗೀತಾ ಅವರಿಗೆ 15 ಸಾವಿರ ರು. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

PREV
click me!

Recommended Stories

ಸ್ಕೂಲ್ ಬಸ್ ಹರಿದು 8 ವರ್ಷದ ಬಾಲಕಿ ಸಾವು; ಚಾಲಕನ ನಿರ್ಲಕ್ಷ್ಯಕ್ಕೆ ಅಮಾಯಕ ಜೀವ ಬಲಿ
ಗೋವಾ ಮಾಲ್ ಸಮೇತ ಅರಣ್ಯದಲ್ಲಿ ಸಿಕ್ಕಿಬಿದ್ದ ವ್ಯಕ್ತಿ; ಗಾಡಿ ಹಿಡಿದ ಖಾಕಿ, ಆರೋಪಿ ಪರಾರಿ!