Covid Crisis : ಒಂದೇ ದಿನ ಎಸ್‌ಐ ಸೇರಿ 17 ಪೊಲೀಸರಿಗೆ

By Kannadaprabha NewsFirst Published Jan 7, 2022, 7:52 AM IST
Highlights
  • ಸಿಲಿಕಾನ್‌ಸಿಟಿಯಲ್ಲಿ ಒಂದೇ ದಿನಕ್ಕೆ ಕೊರೋನಾ ಹೊಸ ಪ್ರಕರಣಗಳು ಶೇ.20ರಷ್ಟುಹೆಚ್ಚಳ
  • ಒಂದೇ ದಿನ ಎಸ್‌ಐ ಸೇರಿ 17 ಪೊಲೀಸರಿಗೆ  ಕೊರೋನಾ ಸೋಂಕು ದೃಢ

  ಬೆಂಗಳೂರು (ಜ.07): ನಗರದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಪಶ್ಚಿಮ ವಿಭಾಗದಲ್ಲಿ ಓರ್ವ ಸಬ್‌ ಇನ್ಸ್‌ಪೆಕ್ಟರ್‌ ಸೇರಿದಂತೆ ಗುರುವಾರ 17 ಮಂದಿ ಪೊಲೀಸರಲ್ಲಿ ಸೋಂಕು ಪತ್ತೆಯಾಗಿದೆ. ಸಿಟಿ ಮಾರ್ಕೆಟ್‌ ಠಾಣೆಯ 14 ಹಾಗೂ ಉಪ್ಪಾರಪೇಟೆ, ಬ್ಯಾಟರಾಯನಪುರ ಮತ್ತು ಕಾಟನ್‌ಪೇಟೆ ಠಾಣೆಯ ತಲಾ ಒಬ್ಬ ಸಿಬ್ಬಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಕೆಲ ಪೊಲೀಸರಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲರಿಗೂ ಕೊರೋನಾ ಪರೀಕ್ಷೆ ನಡೆಸಲಾಯಿತು.

ಆಗ ಸಿಟಿ ಮಾರ್ಕೆಟ್‌ ಠಾಣೆಯ ಎಸ್‌ಐ, 3 ಎಎಸ್‌ಐ ಸೇರಿದಂತೆ 14 ಮಂದಿಗೆ ಪಾಸಿಟಿವ್‌ ಬಂದಿದೆ. ಸೋಂಕಿತ ಪೊಲೀಸರಿಗೆ ಸೂಕ್ತ ವೈದ್ಯಕೀಯ ಸೇವೆ ಕಲ್ಪಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಠಾಣೆಯನ್ನು ಸ್ಯಾನಿಟೈಸ್‌ ಮಾಡಿಸಲಾಗಿದೆ ಎಂದು ಪಶ್ಚಿಮ ವಿಭಾಗ ಡಿಸಿಪಿ ಡಾ. ಸಂಜೀವ್‌ ಎಂ. ಪಾಟೀಲ್‌ ತಿಳಿಸಿದ್ದಾರೆ.

ಬುಧವಾರ ಬ್ಯಾಟರಾಯನಪುರ ಠಾಣೆಯಲ್ಲಿ ಮಹಿಳಾ ಪಿಎಸ್‌ಐಗೆ ಸೋಂಕು ಪತ್ತೆಯಾಗಿತ್ತು. ಈಗ ಅದೇ ಠಾಣೆಯ ಮತ್ತೊಬ್ಬರಲ್ಲಿ ಸೋಂಕು ಧೃಡಪಟ್ಟಿದೆ. ರೋಗ ಲಕ್ಷಣಗಳಿರುವ ಸಿಬ್ಬಂದಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೊರೋನಾ ಬ್ಲಾಸ್ಟ್ :  

ರಾಜ್ಯದಲ್ಲಿ ಇಂದು(ಗುರುವಾರ) ಕೊರೋನಾ (Coronavirus) ಮಹಾಸ್ಪೋಟವಾಗಿದೆ. ಒಂದೇ ದಿನ ಬರೋಬ್ಬರಿ 5031 ಪಾಸಿಟಿವ್ ಕೇಸ್ ಪತ್ತೆಯಾಗಿವೆ. 

 ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,22,603 ಕ್ಕೆ ಏರಿಕೆಯಾಗಿದೆ. ಇದುವರೆಗೆ 29,62,043 ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 38,358 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ  22,173 ಏರಿಕೆಯಾಗಿದೆ. ಪಾಸಿಟಿವಿಟಿ ದರ ಶೇಕಡ 3.95 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ(Bengaluru) ಇಂದು ಹೊಸದಾಗಿ 4324 ಜನರಿಗೆ ಸೋಂಕು ತಗುಲಿದ್ದು, 172 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. 18,913 ಸಕ್ರಿಯ ಪ್ರಕರಣಗಳಿವೆ.

ಬಾಗಲಕೋಟೆ, ರಾಯಚೂರು, ಯಾದಗಿರಿ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಕೊರೋನಾ ಕೇಸ್ ಪತ್ತೆಯಾಗಿಲ್ಲ. ಇನ್ನು ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕೊರೋನಾ ಸಾವಿನ ಬಗ್ಗೆ ವರದಿಯಾಗಿಲ್ಲ.

ಬಳ್ಳಾರಿ 21, ಬೆಳಗಾವಿ 64, ಬೆಂಗಳೂರು ಗ್ರಾಮಾಂತರ 25, ಬೆಂಗಳೂರು ನಗರ 4324, ಚಿಕ್ಕಬಳ್ಳಾಪುರ 20, ದಕ್ಷಿಣಕನ್ನಡ 106, ಧಾರವಾಡ 48, ಗದಗ 11, ಹಾಸನ 47, ಕಲಬುರ್ಗಿ 25, ಕೊಡಗು 19, ಕೋಲಾರ 14, ಮಂಡ್ಯ 66, ಮೈಸೂರು 65, ಶಿವಮೊಗ್ಗ 16, ತುಮಕೂರು 20, ಉಡುಪಿ 92, ಉತ್ತರಕನ್ನಡ 13, ವಿಜಯಪುರ 11 ಹೊಸ ಪ್ರಕರಣ ವರದಿಯಾಗಿವೆ. 

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 3.95 ರಷ್ಟು ಇದೆ. ಬೆಂಗಳೂರಿನಲ್ಲಿ ಪಾಸಿಟಿವಿಟಿ ದರ ಶೇಕಡ 7.5 ರಷ್ಟು ಇದೆ. ಬೆಂಗಳೂರಿನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇಂದು 1,27,194 ಕೋವಿಡ್ ಪರೀಕ್ಷೆ ಮಾಡಲಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ 2 ವಾರ ವೀಕೆಂಡ್ ಕರ್ಫ್ಯೂ 
ರಾಜ್ಯದಲ್ಲಿ ಕೊರೋನಾ ವೈರಸ್(Coronavrius) ಪ್ರಮಾಣ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ. ಅಲ್ಲದೇ ಬೆಂಗಳೂರಲ್ಲಿ ಮಾತ್ರ ಶಾಲೆಗಳನ್ನ ಎರಡು ವಾರ ಬಂದ್ ಮಾಡಲು ಸರ್ಕಾರ ತೀರ್ಮಾನಿಸಿದೆ.

ಇಂದು(ಮಂಗಳವಾರ) ತಜ್ಞರ ಜೊತೆಗಿನ ಸಭೆ ಬಳಿಕ ಸಚಿವರಾದ ಅಶೋಕ್, ಸುಧಾಕರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು,  ಇದೇ ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗ್ಗೆ 5ರ ವರೆಗೆ ವೀಕೆಂಡ್ ಕರ್ಫ್ಯೂ (weekend Curfew)  ಇರಲಿದೆ ಎಂದು  ಸ್ಪಷ್ಟಪಡಿಸಿದರು. 

ಕರ್ನಾಟಕದಾದ್ಯಂತ ಎರಡು ವಾರ ವೀಕೆಂಡ್ ಜಾರಿಯಲ್ಲಿರಲಿದೆ. ಇನ್ನು ಬೆಂಗಳೂರಲ್ಲಿ ಮಾತ್ರ ಎರಡು ವಾರ ಶಾಲೆ ಬಂದ್ ಮಾಡಲು ತೀರ್ಮಾನಿಸಲಾಗಿದೆ ಎಂದರು. 

ಬೆಂಗಳೂರಿನಲ್ಲಿ ಮುಂದಿನ ಎರಡು ವಾರಗಳು (ಜನವರಿ 6ರಿಂದ) 10 ಮತ್ತು 12ನೇ ತರಗತಿ ಹೊರತು ಪಡಿಸಿ ಉಳಿದ ಎಲ್ಲ ತರಗತಿಗಳನ್ನೂ ಬಂದ್ ಮಾಡಿ ಆನ್‌ಲೈನ್‌ ಮೂಲಕ ನಡೆಸಲು ನಿರ್ಧರಿಸಲಾಗಿದೆ.

click me!