ಕಾರು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಾರವಾರದಲ್ಲಿ ನಡೆದಿದೆ.
ಕಾರವಾರ (ಅ.05) : ಕಾರು - ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿಡಾದ ಘಟನೆ ಕಾರವಾರದಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹೆಬ್ಬುಳ ಬಳಿಯಲ್ಲಿ ಅಪಘಾತ ಸಂಭವಿಸಿದೆ. ಈ ವೇಳೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಲಪತಿ ನಾಯ್ಕ್ [56], ರಾಘವೇಂದ್ರ ನಾಯ್ಕ್ [26] ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಕಾರಿನಲ್ಲಿ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದು ಇವರೆಲ್ಲಾ ಕಾರವಾರ ಮೂಲದವರು ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಘಟನೆ ನಡೆದಿದೆ.
ಅಂಕೋಲ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.