ರಾಜ್ಯದ ಇಬ್ಬರು ಬಿಜೆಪಿ ಮುಖಂಡರು 6 ವರ್ಷ ಉಚ್ಛಾಟನೆ

Kannadaprabha News   | Asianet News
Published : Nov 12, 2020, 10:45 AM ISTUpdated : Nov 12, 2020, 11:15 AM IST
ರಾಜ್ಯದ ಇಬ್ಬರು ಬಿಜೆಪಿ ಮುಖಂಡರು 6 ವರ್ಷ ಉಚ್ಛಾಟನೆ

ಸಾರಾಂಶ

ಇಬ್ಬರು ಬಿಜೆಪಿ ಮುಖಂಡರ ಉಚ್ಛಾಟನೆ ಮಾಡಿ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. 

ಮಂಡ್ಯ (ನ.12): ಬಿಜೆಪಿ ಸೂಚನೆಯನ್ನು ಧಿಕ್ಕರಿಸಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಬಿಜೆಪಿ ಮುಖಂಡ ಮದ್ದೂರು ತಾಲೂಕು ಕೊತ್ತನಹಳ್ಳಿಯ ಕ.ಎಸ್ ಮಲ್ಲಿಕಾರ್ಜುನ್ ಹಾಗೂ ಮಂಡ್ಯ ತಾಲೂಕು ಎಚ್‌ ಮಲ್ಲಿಗೆರೆಯ  ಎಂಬಿ ಬಸವರಾಜು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ  ಪಕ್ಷದಿಂದ ಉಚ್ಛಾಟಿಸಲಾಗಿದೆ. 

ಈ ಬಗ್ಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿದ್ಧರಾಜು ತಿಳಿಸಿದ್ದಾರೆ. 

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ  ಅವರು ಕಳೆದ 2 ವರ್ಷಗಳಿಂದಲೂ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವುದಲ್ಲದೇ ಪಕ್ಷದ ಸೂಚನೆಯನ್ನೂ ಧಿಕ್ಕರಿಸಿ ನಡೆದುಕೊಳ್ಳುವ ಮೂಲಕ ಪಕ್ಷದ ಘನತೆಗೆ   ಕುಂದುಂಟು ಮಾಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದೀರಿ ಎಂದು ಆರೋಪಿಸಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶದ ಮೇರೆಗೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಲಾಗಿದೆ. 

ಶಿರಾ ಚುನಾವಣೆ : ಬುಡಮೇಲಾದ ರಾಜಕೀಯ ಲೆಕ್ಕಾಚಾರ!...

ಬಿಜೆಪಿ ಜಿಲ್ಲಾಧ್ಯಕ್ಷ ಕೆಜೆ ವಿಜಯಕುಮಾರ್ ವಿರುದ್ಧ ಇತ್ತೀಚೆಗೆ ಪಕ್ಷದ  ಜಿಲ್ಲಾ ಕಚೇರಿ ಮುಂದೆ ಕೆಲ ಕಾರ್ಯಕತ್ರರೊಂದಿಗೆ ಮಲ್ಲಿಕಾರ್ಜುನ್ ಮತ್ತು ಎಂಬಿ ಬಸವರಾಜು ಪ್ರತಿಭಟನೆ ನಡೆಸಿದ್ದಾರೆ. 

ಈ ನಿಟ್ಟಿನಲ್ಲಿ ಶಿಸ್ತುಕ್ರಮ ಕೈಗೊಳ್ಳಲಾಗಿದೆ. 

PREV
click me!

Recommended Stories

ಹೊಸ ರೈಲ್ವೆ ಮಾರ್ಗಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ಆರಂಭ, ದೆಹಲಿಗೆ ಬನ್ನಿ ಎಂದ ಹೆಚ್‌ಡಿಕೆ, ರೈತರಿಗೆ ಸಿಗುವುದೇ ನ್ಯಾಯ?
ಚಿಕ್ಕಬಳ್ಳಾಪುರ ಅಲೀಪುರದಲ್ಲಿ ಖಮೇನಿ ಹತ್ಯೆಗೆ ಬಂದ್, ಕಣ್ಣೀರಿಟ್ಟ ಜನರಿಗೆ ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನೆ