ರಾಯಚೂರು: ಶ್ರೀಶೈಲ ಪಾದಯಾತ್ರೆ, ದಾರಿ ಮಧ್ಯೆ ಹೃದಯಾಘಾತ ಯುವಕ ಸಾವು

By Girish GoudarFirst Published Mar 31, 2024, 7:25 AM IST
Highlights

ಪಾದಯಾತ್ರೆ ಮಾನ್ವಿ ತಾಲೂಕಿನ ಚಿಕ್ಕಕೊಟ್ನೆಕಲ್ ಗ್ರಾಮಕ್ಕೆ ತಲುಪಿತ್ತು. ಸುಸ್ತಾಗಿರೋ ಹಿನ್ನೆಲೆ ದಾರಿ ಮಧ್ಯೆ ವಿಶ್ರಾಂತಿಗೆಂದು ಶ್ರೀಶೈಲ ಕುಳಿತಿದ್ದರು. ಈ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 

ರಾಯಚೂರು(ಮಾ.31): ಶ್ರೀಶೈಲ ಪಾದಯಾತ್ರಾರ್ಥಿಗೆ ದಾರಿ ಮಧ್ಯೆ ಹೃದಯಾಘಾತ ಸಂಭವಿಸಿದ ಪರಿಣಾಮ ವಿಶ್ರಾಂತಿ ಕುಳಿತ ಸ್ಥಳದಲ್ಲೇ ಸಾವನ್ನಪ್ಪಿದ ಯುವಕ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚಿಕ್ಕ ಕೊಟ್ನೆಕಲ್ ಗ್ರಾಮದ ಬಳಿ ನಡೆದಿದೆ. 

ಮೃತ ಯುವಕನ್ನ ಬಾಗಲಕೋಟೆ ಮೂಲದ ಯುವಕ ಶ್ರೀಶೈಲ (22) ಎಂದು ಗುರುತಿಸಲಾಗಿದೆ. ಸೋಮವಾರದಂದು ಮನೆಯಿಂದ ಶ್ರೀಶೈಲ ಪಾದಯಾತ್ರೆ ಹೊರಟಿದ್ದರು. ಪ್ರತಿ ವರ್ಷದಂತೆ ಗ್ರಾಮಸ್ಥರ ಜೊತೆಗೂಡಿ ಶ್ರೀಶೈಲ ಪಾದಯಾತ್ರೆ ಹೊರಟಿದ್ದರು. 

ನಿದ್ದೆ ಕಡಿಮೆಯಾದ್ರೆ ಹಾರ್ಟ್ ಅಟ್ಯಾಕ್ ಆಗುತ್ತಾ? ನಿಮ್ಮ ವಯಸ್ಸಿಗೆ ನೀವೆಷ್ಟು ಸಮಯ ನಿದ್ರಿಸಬೇಕು?

ಪಾದಯಾತ್ರೆ ಮಾನ್ವಿ ತಾಲೂಕಿನ ಚಿಕ್ಕಕೊಟ್ನೆಕಲ್ ಗ್ರಾಮಕ್ಕೆ ತಲುಪಿತ್ತು. ಸುಸ್ತಾಗಿರೋ ಹಿನ್ನೆಲೆ ದಾರಿ ಮಧ್ಯೆ ವಿಶ್ರಾಂತಿಗೆಂದು ಶ್ರೀಶೈಲ ಕುಳಿತಿದ್ದರು. ಈ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನ ಮಾನ್ವಿ ತಾಲೂಕು ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. 

click me!