ಯಾದಗಿರಿ: ಕೃಷ್ಣ ನದಿಗೆ ನೀರು, ಎಚ್ಚರದಿಂದಿರಲು ಸೂಚನೆ

Kannadaprabha News   | Asianet News
Published : Jul 15, 2021, 01:58 PM IST
ಯಾದಗಿರಿ: ಕೃಷ್ಣ ನದಿಗೆ ನೀರು, ಎಚ್ಚರದಿಂದಿರಲು ಸೂಚನೆ

ಸಾರಾಂಶ

* ಬಸವಸಾಗರ ಜಲಾಶಯಕ್ಕೆ ಒಳ ಹರಿವು ಹೆಚ್ಚಳ * ಕೃಷ್ಣಾ ನದಿ ದಡದಲ್ಲಿರುವ ಜನರು ಜಾಗೃತಿ ವಹಿಸಲು ಸೂಚನೆ * ಕೃಷ್ಣಾ ನದಿಗೆ 24000 ಕ್ಯುಸೆಕ್‌ ನೀರನ್ನು ನದಿಗೆ ಹರಿಬಿಡಲಾಗಿದೆ    

ಯಾದಗಿರಿ(ಜು.15):  ಜಿಲ್ಲೆಯ ಹುಣಸಗಿ ತಾಲೂಕಿನ ಬಸವಸಾಗರ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗಿದ್ದರಿಂದ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 4 ಗೇಟ್‌ಗಳ ಮೂಲಕ 24000 ಕ್ಯುಸೆಕ್‌ ನೀರನ್ನು ನದಿಗೆ ಹರಿಬಿಡಲಾಗಿದೆ ಎಂದು ಅಣೆಕಟ್ಟು ವಿಭಾಗದ ಮೂಲಗಳಿಂದ ತಿಳಿದು ಬಂದಿದೆ.

ಜನರಲ್ಲಿ ಜಾಗೃತಿ:

ಬಸವಸಾಗರ ಜಲಾಶಯದಿಂದ ನೀರು ಹರಿಸುತ್ತಿರುವುದರಿಂದ ನದಿ ಪಾತ್ರದ ಮೇಲಿನಗಡ್ಡಿ, ದೇವರಗಡ್ಡಿ, ಬೆಂಚಿಗಡ್ಡಿ, ನೀಲಕಂಠರಾಯನ ಗಡ್ಡಿ, ತಿಂಥಣಿ ಬಂಡೋಳಿ ಸೇರಿದಂತೆ ಇತರೆ ಹಳ್ಳಿಗಳ ಜನ-ಜಾನುವಾರು ಹಾಗೂ ಮೀನುಗಾರರು ನದಿಗೆ ಇಳಿಯದೆ ಎಚ್ಚರ ವಹಿಸಬೇಕೆಂದು ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಯಾದಗಿರಿ: ಬಸವಸಾಗರ ಜಲಾಶಯ ಬಹುತೇಕ ಭರ್ತಿ

ಆಲಮಟ್ಟಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದರೆ ಬಸವಸಾಗರ ಜಲಾಶಯದಿಂದ ಇನ್ನು ಹೆಚ್ಚಿನ ಗೇಟ್‌ಗಳ ಮೂಲಕ ನದಿಗೆ ನೀರು ಬಿಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ.
 

PREV
click me!

Recommended Stories

ಬೆಂಗಳೂರು: ಲೈಸನ್ಸ್‌ ಕೊಡಬೇಕಾದ್ರೆ 2.30 ಕೋಟಿ ಲಂಚ, ಹಣ ಪಡೆಯವಾಗಲೇ ಲೋಕಾ ಬಲೆಗೆ ಬಿದ್ದ ಅಬಕಾರಿ ಉಪ ಆಯುಕ್ತ!
ದೇವನಹಳ್ಳಿಯಲ್ಲಿ ಬೈಕ್ -ಲಾರಿ ನಡುವೆ ಭೀಕರ ಅಪಘಾತ, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು!