ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು ಉಳ್ಳಾಲ ಪರಿಸರದಲ್ಲಿ ಗುರುವಾರ ಒಂದೇ ದಿನ ಒಟ್ಟು 28 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟವರದಿಯಾಗಿದೆ.
ಉಳ್ಳಾಲ(ಜು.03): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು ಉಳ್ಳಾಲ ಪರಿಸರದಲ್ಲಿ ಗುರುವಾರ ಒಂದೇ ದಿನ ಒಟ್ಟು 28 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟವರದಿಯಾಗಿದೆ. ಗುರುವಾರ ಉಳ್ಳಾಲ ಸುತ್ತಮುತ್ತಲಿನ ಪ್ರದೇಶದಲ್ಲಿ 2 ವರ್ಷ 3 ವರ್ಷದ ಮಕ್ಕಳು ಸೇರಿ 28 ಮಂದಿಗೆ ಸೋಂಕು ಹರಡಿದೆ.
ಸೋಂಕಿತರಲ್ಲಿ ಅನಿಲ ಕಂಪೌಂಡ್ ಉಳ್ಳಾಲದ 6 ಮತ್ತು 3 ರ ಹರೆಯದ ಬಾಲಕರು , ಮುಕ್ಕಚ್ಚೇರಿಯ 29ರ ಮಹಿಳೆ, 39 ವರ್ಷದ ಗಂಡಸು, ಆಝಾದನಗರ ಉಳ್ಳಾಲದ 44 ಹಾಗೂ 55 ರ ಗಂಡಸು, 36, 50, 30ರ ಮಹಿಳೆಯರು, 13 ಹಾಗೂ 8ರ ಬಾಲಕರು, 12 ವರ್ಷದ ಬಾಲಕಿ, 2 ವರ್ಷದ ಹರೆಯದ ಮಗು, ಉಳ್ಳಾಲ ಪಟೇಲ ಕಂಪೌಂಡಿನ 51ರ ಹರೆಯದ ಗಂಡಸು, ಹರೇಕಳ ಪಂಚಾಯತ್ ಬಳಿಯ 26 ರ ಯುವಕ , ಅಕ್ಕರೆಕೆರೆ ಉಳ್ಳಾಲದ 46 ವರ್ಷದ ಗಂಡಸು , ಮುನ್ನೂರು ಸಂತೋಷನಗರದ 52 ರ ಗಂಡಸು, ತೊಕ್ಕೊಟ್ಟು ಪರಿಸರದ 13ವರ್ಷದ ಬಾಲಕಿ , ಮೇಲಂಗಡಿ ಉಳ್ಳಾಲದ 32 ವರ್ಷದ ಗಂಡಸು, ಉಳ್ಳಾಲ ಹೈದರಾಲಿ ರಸ್ತೆಯ 30 ವರ್ಷದ ಗಂಡಸು, ಮುಕ್ಕಚ್ಚೇರಿ ರಸ್ತೆಯ 48 ವರ್ಷದ ಗಂಡಸು, ಸುಲ್ತಾನ್ ನಗರ ಉಳ್ಳಾಲದ 48ವರ್ಷದ ಗಂಡಸು, ಉಳ್ಳಾಲ ಪದ್ಮಶಾಲಿ ಕಂಪೌಂಡಿನ 44 ವರ್ಷದ ಮಹಿಳೆ , ಮೊಗವೀರಪಟ್ನ ಉಳ್ಳಾಲದ 54 ವರ್ಷದ ಗಂಡಸು , ಸೋಮೇಶ್ವರ ಉಳ್ಳಾಲದ 65 ವರ್ಷದ ಗಂಡಸು, ಅನಿಲಕಂಪೌಂಡ್ ಉಳ್ಳಾಲದ 29ವರ್ಷದ ಗಂಡಸು, ಕಲ್ಲಾಪು ತೊಕ್ಕೊಟ್ಟು ವಿನ 27ವರ್ಷದ ಮಹಿಳೆ ಸೇರಿ ಸೋಮೇಶ್ವರ, ಮುನ್ನೂರು, ಹರೇಕಳದಲ್ಲಿ ಮೂವರು ಸೇರಿ ಒಟ್ಟು 28 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ.
ಗಲ್ಫ್ ಕನ್ನಡಿಗರಿಗೆ ಸಂಕಷ್ಟ: ಕೊರೋನಾ ನೆಗೆಟಿವ್ ಆದ್ರೆ ಮಾತ್ರ ತವರಿಗೆ ಬರಬಹುದು..!
ಸ್ವಯಂ ಪ್ರೇರಿತ ಬಂದ್: ಕೋವಿಡ್ -19 ಅಟ್ಟಹಾಸ ಉಳ್ಳಾಲದಾದ್ಯಂತ ಮುಂದುವರಿದ ಹಿನ್ನೆಲೆಯಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಉಳ್ಳಾಲ ಜಂಕ್ಷನ್ , ಕೋಟೆಪುರ ಅಳೇಕಲ, ಮಂಚಿಲ, ಮಾರ್ಗತಲೆ, ಹಳೆಕೋಟೆ ಪ್ರದೇಶಗಳಲ್ಲಿ ಗುರುವಾರ ಅಂಗಡಿ ಮುಂಗಟ್ಟುಗಳನ್ನು ತೆರೆಯದೆ ಸ್ವಯಂ ಪ್ರೇರಿತವಾಗಿ ಬಂದ್ ನಡೆಸಿದರು. ತೊಕ್ಕೊಟ್ಟು, ಉಳ್ಳಾಲ ಭಾಗಗಳಲ್ಲಿ ರಿಕ್ಷಾ ಚಾಲಕರು ಮಧ್ಯಾಹ್ನ 12.30ರ ವರೆಗೆ ಮಾತ್ರ ಕಾರ್ಯನಿರ್ವಹಿಸಿ ಸ್ವಯಂಪ್ರೇರಿತರಾಗಿ ಬಂದ್ ನಡೆಸಿದ್ದಾರೆ.