ವಿಜಯಪುರ: ಕುರಿ ಮರಿ ರಕ್ಷಿಸಿ ತಾನು ನೀರಲ್ಲಿ ಮುಳುಗಿ ಅಸುನೀಗಿದ..!

Published : Jul 24, 2024, 11:06 PM ISTUpdated : Jul 25, 2024, 09:28 AM IST
ವಿಜಯಪುರ: ಕುರಿ ಮರಿ ರಕ್ಷಿಸಿ ತಾನು ನೀರಲ್ಲಿ ಮುಳುಗಿ ಅಸುನೀಗಿದ..!

ಸಾರಾಂಶ

ನಾಗಬೇನಾಳ ಗ್ರಾಮದ ಮಂಜುನಾಥ್ ಮಾದರ ಕುರಿಕಾಯಲು ನಾಗಬೇನಾಳ ಸಮೀಪದ ಚಕ್ ಪೋಸ್ಟ್‌ ಹತ್ತಿರದ ನಾರಾಯಣಪೂರ ಎಡದಂಡೆ ಕಾಲುವೆ ಬಳಿ ಕುರಿಕಾಯುತ್ತಿದ್ದ. ಈ ಸಮಯದಲ್ಲಿ ಕುರಿ ಮರಿಯೊಂದು ಜಾರಿ ಕಾಲುವೆಗೆ ಬಿದ್ದಿದೆ. ಆ ಮರಿಯನ್ನು ರಕ್ಷಣೆ ಮಾಡಲು ಮಂಜುನಾಥ ಕಾಲುವೆ ಜಿಗಿದಿದ್ದು, ಕುರಿ ಮರಿಯನ್ನು ರಕ್ಷಣೆ ಮಾಡಿ ನೀರಿನ ರಭಸಕ್ಕೆ ಆತ ಕೊಚ್ಚಿ ಹೋಗಿದ್ದಾನೆ.  

ನಾಲತವಾಡ(ಜು.24):  ಕುರಿ ಮರಿ ರಕ್ಷಣೆ ಮಾಡಲು ಹೋಗಿ ಗುರಿಗಾಯಿಯೊಬ್ಬ ನೀರು ಪಾಲಾಗಿರುವ ಘಟನೆ ನಾಲತವಾಡ ಸಮೀಪದ ನಾಗಬೇನಾಳ ಬಳಿ ನಡೆದಿದೆ. 

ನಾಗಬೇನಾಳ ಗ್ರಾಮದ ಮಂಜುನಾಥ್ ಮಾದರ(28) ಸೋಮವಾರ ಕುರಿಕಾಯಲು ನಾಗಬೇನಾಳ ಸಮೀಪದ ಚಕ್ ಪೋಸ್ಟ್‌ ಹತ್ತಿರದ ನಾರಾಯಣಪೂರ ಎಡದಂಡೆ ಕಾಲುವೆ ಬಳಿ ಕುರಿಕಾಯುತ್ತಿದ್ದ. ಈ ಸಮಯದಲ್ಲಿ ಕುರಿ ಮರಿಯೊಂದು ಜಾರಿ ಕಾಲುವೆಗೆ ಬಿದ್ದಿದೆ. ಆ ಮರಿಯನ್ನು ರಕ್ಷಣೆ ಮಾಡಲು ಮಂಜುನಾಥ ಕಾಲುವೆ ಜಿಗಿದಿದ್ದು, ಕುರಿ ಮರಿಯನ್ನು ರಕ್ಷಣೆ ಮಾಡಿ ನೀರಿನ ರಭಸಕ್ಕೆ ಆತ ಕೊಚ್ಚಿ ಹೋಗಿದ್ದಾನೆ.

Breaking: ವಿಜಯಪುರದಲ್ಲಿ ಭೂಕಂಪ: ಭಯಾನಕ ಸದ್ದಿಗೆ ಬೆಚ್ಚಿ ಬಿದ್ದ ಜನತೆ..!

ಪೊಲೀಸ್‌ ಅಧಿಕಾರಿಗಳ ಭೇಟಿ: 

ಘಟನಾ ಸ್ಥಳಕ್ಕೆ ಬಾಗೇವಾಡಿಯ ಡಿಎಸ್ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಿವ ತಿಪ್ಪಾರೆಡ್ಡಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶವಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

PREV
Read more Articles on
click me!

Recommended Stories

ಬೆಂಗಳೂರು : ಹೊಸ ವರ್ಷಾಚರಣೆಗೆ ಹೊಸ ಮಾರ್ಗಸೂಚಿಗೆ ಸಿದ್ಧತೆ
ನಗರ ವಿವಿ ಎಡವಟ್ಟು: 400 ಎಂಕಾಂ ಸ್ಟೂಡೆಂಟ್ಸ್ ಫೇಲ್‌!