ವಿಜಯಪುರ: ಕುರಿ ಮರಿ ರಕ್ಷಿಸಿ ತಾನು ನೀರಲ್ಲಿ ಮುಳುಗಿ ಅಸುನೀಗಿದ..!

Published : Jul 24, 2024, 11:06 PM ISTUpdated : Jul 25, 2024, 09:28 AM IST
ವಿಜಯಪುರ: ಕುರಿ ಮರಿ ರಕ್ಷಿಸಿ ತಾನು ನೀರಲ್ಲಿ ಮುಳುಗಿ ಅಸುನೀಗಿದ..!

ಸಾರಾಂಶ

ನಾಗಬೇನಾಳ ಗ್ರಾಮದ ಮಂಜುನಾಥ್ ಮಾದರ ಕುರಿಕಾಯಲು ನಾಗಬೇನಾಳ ಸಮೀಪದ ಚಕ್ ಪೋಸ್ಟ್‌ ಹತ್ತಿರದ ನಾರಾಯಣಪೂರ ಎಡದಂಡೆ ಕಾಲುವೆ ಬಳಿ ಕುರಿಕಾಯುತ್ತಿದ್ದ. ಈ ಸಮಯದಲ್ಲಿ ಕುರಿ ಮರಿಯೊಂದು ಜಾರಿ ಕಾಲುವೆಗೆ ಬಿದ್ದಿದೆ. ಆ ಮರಿಯನ್ನು ರಕ್ಷಣೆ ಮಾಡಲು ಮಂಜುನಾಥ ಕಾಲುವೆ ಜಿಗಿದಿದ್ದು, ಕುರಿ ಮರಿಯನ್ನು ರಕ್ಷಣೆ ಮಾಡಿ ನೀರಿನ ರಭಸಕ್ಕೆ ಆತ ಕೊಚ್ಚಿ ಹೋಗಿದ್ದಾನೆ.  

ನಾಲತವಾಡ(ಜು.24):  ಕುರಿ ಮರಿ ರಕ್ಷಣೆ ಮಾಡಲು ಹೋಗಿ ಗುರಿಗಾಯಿಯೊಬ್ಬ ನೀರು ಪಾಲಾಗಿರುವ ಘಟನೆ ನಾಲತವಾಡ ಸಮೀಪದ ನಾಗಬೇನಾಳ ಬಳಿ ನಡೆದಿದೆ. 

ನಾಗಬೇನಾಳ ಗ್ರಾಮದ ಮಂಜುನಾಥ್ ಮಾದರ(28) ಸೋಮವಾರ ಕುರಿಕಾಯಲು ನಾಗಬೇನಾಳ ಸಮೀಪದ ಚಕ್ ಪೋಸ್ಟ್‌ ಹತ್ತಿರದ ನಾರಾಯಣಪೂರ ಎಡದಂಡೆ ಕಾಲುವೆ ಬಳಿ ಕುರಿಕಾಯುತ್ತಿದ್ದ. ಈ ಸಮಯದಲ್ಲಿ ಕುರಿ ಮರಿಯೊಂದು ಜಾರಿ ಕಾಲುವೆಗೆ ಬಿದ್ದಿದೆ. ಆ ಮರಿಯನ್ನು ರಕ್ಷಣೆ ಮಾಡಲು ಮಂಜುನಾಥ ಕಾಲುವೆ ಜಿಗಿದಿದ್ದು, ಕುರಿ ಮರಿಯನ್ನು ರಕ್ಷಣೆ ಮಾಡಿ ನೀರಿನ ರಭಸಕ್ಕೆ ಆತ ಕೊಚ್ಚಿ ಹೋಗಿದ್ದಾನೆ.

Breaking: ವಿಜಯಪುರದಲ್ಲಿ ಭೂಕಂಪ: ಭಯಾನಕ ಸದ್ದಿಗೆ ಬೆಚ್ಚಿ ಬಿದ್ದ ಜನತೆ..!

ಪೊಲೀಸ್‌ ಅಧಿಕಾರಿಗಳ ಭೇಟಿ: 

ಘಟನಾ ಸ್ಥಳಕ್ಕೆ ಬಾಗೇವಾಡಿಯ ಡಿಎಸ್ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಿವ ತಿಪ್ಪಾರೆಡ್ಡಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶವಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

PREV
Read more Articles on
click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಗೆಳೆಯರ ಜೊತೆ ಟ್ರಿಪ್ ಹೋಗಿದ್ದ ಬೆಂಗಳೂರು ನಿವಾಸಿ ಗೋವಾ ನೈಟ್ ಕ್ಲಬ್ ದುರಂತದಲ್ಲಿ ಮೃತ