ಉತ್ತರಕನ್ನಡ: 2ನೇ ದಿನಕ್ಕೆ ಕಾಲಿಟ್ಟ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಧರಣಿ ಸತ್ಯಾಗ್ರಹ

Published : Nov 28, 2023, 10:38 PM IST
ಉತ್ತರಕನ್ನಡ: 2ನೇ ದಿನಕ್ಕೆ ಕಾಲಿಟ್ಟ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಧರಣಿ ಸತ್ಯಾಗ್ರಹ

ಸಾರಾಂಶ

ಅನಂತಮೂರ್ತಿ ಹೆಗಡೆಯವರ ಹೋರಾಟಕ್ಕೆ ಗಣ್ಯರು ಹಾಗೂ ಜನಸಾಮಾನ್ಯರಿಂದ ಉತ್ತಮ ಬೆಂಬಲ ದೊರಕುತ್ತಿದ್ದು, ಜನರ ರಕ್ಷಣೆಗಾಗಿ ಆಸ್ಪತ್ರೆಯ ನಿರ್ಮಾಣದ ಬೇಡಿಕೆಯ ಕೂಗು ಜೋರಾಗಿದೆ.   

ಉತ್ತರಕನ್ನಡ(ನ.28):  ಉತ್ತರಕನ್ನಡ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಶಿರಸಿ ತಹಶೀಲ್ದಾರ್ ಕಚೇರಿ ಮುಂಭಾಗ ಹಮ್ಮಿಕೊಂಡ 7 ದಿನಗಳ ಧರಣಿ  ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ.  ಅನಂತಮೂರ್ತಿ ಹೆಗಡೆಯವರ ಹೋರಾಟಕ್ಕೆ ಗಣ್ಯರು ಹಾಗೂ ಜನಸಾಮಾನ್ಯರಿಂದ ಉತ್ತಮ ಬೆಂಬಲ ದೊರಕುತ್ತಿದ್ದು, ಜನರ ರಕ್ಷಣೆಗಾಗಿ ಆಸ್ಪತ್ರೆಯ ನಿರ್ಮಾಣದ ಬೇಡಿಕೆಯ ಕೂಗು ಜೋರಾಗಿದೆ. 

ನಿನ್ನೆ ಜನ ಬೆಂಬಲದೊಂದಿಗೆ ಮೆರವಣಿಗೆಯಲ್ಲಿ ಸಾಗಿ ತಹಶೀಲ್ದಾರ್ ಕಚೇರಿ ಮುಂದೆ‌ ಧರಣಿ ಸತ್ಯಾಗ್ರಹ ಪ್ರಾರಂಭಿಸಿದ್ದು, 7 ದಿನಗಳ ಕಾಲ ಹೋರಾಟ ನಡೆಸುವುದಾಗಿ ಘೋಷಣೆ ಮಾಡಿದ್ದರು. ತಮ್ಮ ಸತ್ಯಾಗ್ರಹದ ಎರಡನೇ ದಿನ ಜನರನ್ನುದ್ದೇಶಿಸಿ ಮಾತನಾಡಿದ ಅನಂತಮೂರ್ತಿ ಹೆಗಡೆ ಅವರು, ನಮಗೆ ಆಸ್ಪತ್ರೆ ನೀಡಿ ಜೀವ ಉಳಿಸಿ. ಇದು ಉತ್ತರಕನ್ನಡ ಜಿಲ್ಲೆಯ ಜನರ ಸ್ವಾಭಿಮಾನದ ಹೋರಾಟ. ಘಟ್ಟದ ಮೇಲೊಂದು ,ಘಟ್ಟದ ಕೆಳಗೊಂದು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಆಗಲೇಬೇಕು ಎನ್ನುವುದು ನಮ್ಮ‌ ಕೂಗು. ನಮ್ಮದು ಈಗ ಶಾಂತಿಯುತ ಹೋರಾಟ, ಸರ್ಕಾರ ಆದಷ್ಟೂ ಬೇಗ ನಮಗೆ ಆಸ್ಪತ್ರೆ ನೀಡಲೇಬೇಕು, ನೀಡದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದ ಅವರು, ಪ್ರತಿಯೊಬ್ಬರು ಕೂಡಾ ಈ ಹೋರಾಟದಲ್ಲಿ ಭಾಗವಹಿಸಲು ಕರೆ ನೀಡಿದರು.‌

ಉತ್ತರಕನ್ನಡ: ಹೊನ್ನಾವರದ ಇಡಗುಂಜಿ ದೇವಸ್ಥಾನದಲ್ಲಿ ಪಂಕ್ತಿಬೇಧ...?

ಡಿಸೆಂಬರ್ 4ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುವ ವಿಧಾನಸಭಾ ಅಧೀವೇಶನ ಸಂದರ್ಭದಲ್ಲೂ ಸುವರ್ಣಸೌಧಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ.

PREV
Read more Articles on
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ