ಚಿಕ್ಕಮಗಳೂರು ಪ್ರವಾಸದ ಪ್ಲಾನ್ ಇದ್ಯಾ ? 3 ದಿನ ನಿರ್ಬಂಧವಿದೆ

Published : Nov 28, 2019, 10:19 AM IST
ಚಿಕ್ಕಮಗಳೂರು ಪ್ರವಾಸದ ಪ್ಲಾನ್ ಇದ್ಯಾ ? 3 ದಿನ ನಿರ್ಬಂಧವಿದೆ

ಸಾರಾಂಶ

ಚಿಕ್ಕಮಗಳೂರಿನಲ್ಲಿ ಪ್ರವಾಸಿಗರಿಗೆ ಮೂರು ದಿನಗಳ ಕಾಲ ನಿರ್ಬಂಧ ವಿಧಿಸಲಾಗಿದೆ. ದತ್ತಮಾಲಾ ಜಯಂತಿ ಹಿನ್ನೆಲೆ ಇಲ್ಲಿನ ಹಲವು ಪ್ರದೇಶಗಳಿಗೆ ಎಂಟ್ರಿ ಇರುವುದಿಲ್ಲ.

ಚಿಕ್ಕಮಗಳೂರು (ನ.28): ಶ್ರೀ ಗುರು ಇನಾಂ ದತ್ತಾತ್ರೇಯ ಬಾಬಾಬುಡನ್‌ ಸ್ವಾಮಿ ದರ್ಗಾದಲ್ಲಿ ಡಿ.10ರಿಂದ 12 ರವರೆಗೆ ದತ್ತ ಜಯಂತಿ ಕಾರ್ಯಕ್ರಮ ನಡೆಯುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಹಲವು ಪ್ರದೇಶಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. 

ಡಿ.9 ರ ಸಂಜೆ 6 ಗಂಟೆಯಿಂದ ಡಿ.13ರ ಬೆಳಗ್ಗೆ 6 ಗಂಟೆಯವರೆಗೆ ಜಿಲ್ಲೆಯ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಮಾಣಿಕ್ಯಧಾರಾ, ಸೀತಾಳಯ್ಯನಗಿರಿ, ಹೊನ್ನಮ್ಮನಹಳ್ಳ ಮತ್ತು ದತ್ತಪೀಠಕ್ಕೆ ಪ್ರವಾಸಿಗರ ಭೇಟಿಯನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

10, 11, 12 ಮೂರು ದಿನಗಳ ಕಾಲ ಸಂಪೂರ್ಣ ಬಂದ್ ಆಗಿಲಿದ್ದು, ಡಿಸೆಂಬರ್ 13 ರ ಬೆಳಗ್ಗೆ‌ 6 ರವರೆಗೆ ಇಲ್ಲಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.

ಕಾಲುವೆ ರಹಸ್ಯ: ಕೊನೆಗೂ ಬಯಲಾಯ್ತು ಮೂಡಿಗೆರೆ ಭೂಕುಸಿತದ ಹಿಂದಿನ ಕಾರಣ!...

ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಚಿಕ್ಕಮಗಳೂರಿ ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ನೀಡಿದ್ದಾರೆ. 

PREV
click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಖರ್ಗೆ ಪ್ರಧಾನಿ ಆಗಲಿಲ್ಲ, ನಾನು ಮಂತ್ರಿ ಆಗಲಿಲ್ಲ, ನೋವು ತೋಡಿಕೊಂಡ ಬಸವರಾಜ ರಾಯರೆಡ್ಡಿ