ಮೈಸೂರು: ಜಂಬೂ ಸವಾರಿಯಲ್ಲಿ 39 ಆಕರ್ಷಕ ಸ್ತಬ್ಧಚಿತ್ರಗಳು

Published : Oct 05, 2019, 08:42 AM ISTUpdated : Oct 05, 2019, 08:48 AM IST
ಮೈಸೂರು: ಜಂಬೂ ಸವಾರಿಯಲ್ಲಿ 39 ಆಕರ್ಷಕ ಸ್ತಬ್ಧಚಿತ್ರಗಳು

ಸಾರಾಂಶ

ಮೈಸೂರಿನಲ್ಲಿ ಜಂಬೂ ಸವಾರಿಯಲ್ಲಿ 39 ಆಕರ್ಷಕ ಸ್ತಬ್ಧ ಚಿತ್ರಗಳು ಆಕರ್ಷಣೆಯ ಕೇಂದ್ರವಾಗಲಿದೆ. ಬೆಳಗಾವಿಯ ನೆರೆ, ಚಂದ್ರಯಾನ ಸೇರಿ ಹಲವಾರು ಇಂಟ್ರೆಸ್ಟಿಂಗ್ ಕಾನ್ಸೆಪ್ಟ್‌ಗಳನ್ನು ಒಳಗೊಂಡ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿರಲಿವೆ.

ಮೈಸೂರು(ಅ.05): ರಾಜ್ಯದ ವಿವಿಧ ಜಿಲ್ಲೆಯ ಪರಂಪರೆ ಹಾಗೂ ವೈವಿಧ್ಯತೆ ಅನಾವರಣಗೊಳಿಸುವ ಮತ್ತು ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಿಳಿಸುವ ಒಟ್ಟು 39 ಸ್ತಬ್ಧಚಿತ್ರಗಳು ಈ ಬಾರಿ ದಸರಾ ಮೆರವಣಿಗೆಯಲ್ಲಿ ಸಾಗಲಿವೆ ಎಂದು ಸ್ತಬ್ಧಚಿತ್ರ ಉಪಸಮಿತಿ ಅಧ್ಯಕ್ಷ ಸು. ಮುರಳಿ ತಿಳಿಸಿದ್ದಾರೆ.

ಮೈಸೂರು ಜಿಪಂ ಡಿ. ದೇವರಾಜ ಅರಸು ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಕಳೆದ ಬಾರಿಗಿಂತ ವಿಶೇಷವಾದ ಸ್ತಬ್ಧಚಿತ್ರಗಳು ಮೂಡಿ ಬರಲಿದ್ದು, ಅಂಬಾರಿ ಮೆರವಣಿಗೆಗೆ ಯಾವುದೇ ಅಡಚಣೆಯಾಗಬಾರದು ಎಂಬ ದೃಷ್ಠಿಯಿಂದ ಈ ಬಾರಿ 39 ಸ್ತಬ್ಧಚಿತ್ರಗಳಿಗೆ ಸೀಮಿತಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಯುವದಸರಾ ವೇದಿಕೆಯಲ್ಲೇ ನಿವೇದಿತಾಗೆ ಚಂದನ್ ಶೆಟ್ಟಿ ಪ್ರಪೋಸ್

ಈ ಬಾರಿ ವಿಶೇಷವಾಗಿ ಐತಿಹಾಸಿಕ ಹಿನ್ನಲೆ, ಕಲೆ, ವಾಸ್ತುಶಿಲ್ಪ ಮತ್ತು ಸಂಸ್ಕೃತಿ, ಪರಿಸರ, ಅರಣ್ಯೀಕರಣ, ಅಂತರ್ಜಲ, ನೆರೆ- ಬರ, ಚಂದ್ರಯಾನ, ಸಂವಿಧಾನ ಸಾಮಾಜಿಕ ನ್ಯಾಯ ಹಾಗೂ ಸಮಾನತೆ ಕುರಿತು ಬಿಂಬಿಸುವ ಸ್ತಬ್ಧಚಿತ್ರಗಳು ನಗರದ ಎಪಿಎಂಸಿ ಆವರಣದಲ್ಲಿ ತಯಾರಾಗುತ್ತಿದ್ದು, ಬಂದಂತಹ ಕಲಾವಿದರಿಗೆ ಎಲ್ಲಾ ರೀತಿಯ ಸೌಲಭ್ಯ ಒದಗಿಸಲಾಗಿದೆ. ಇನ್ನೂ 2 ದಿನಗಳಲ್ಲಿ ಅಂತಿಮವಾಗಲಿದೆ ಎಂದು ಅವರು ವಿವರಿಸಿದ್ದಾರೆ.

ಜಿಲ್ಲಾವಾರು ಸ್ತಬ್ಧಚಿತ್ರಗಳು:

ಬೆಳಗಾವಿ- ಅತಿವೃಷ್ಟಿಪ್ರವಾಹದಿಂದ ನಲುಗಿದ ಬೆಳಗಾವಿ, ಬಾಗಲಕೋಟೆ- ಅತಿವೃಷ್ಠಿ ಹಾಗೂ ಪುನರ್ವಸತಿ ಕಾರ್ಯಗಳು, ಧಾರವಾಡ- ಸಾಂಸ್ಕೃತಿಕ ವೈಭವ, ಹಾವೇರಿ- ಶಂಖನಾದ ಮೊಳಗಿಸುತ್ತಿರುವ ಕನಕದಾಸರು, ಗದಗ- ಬೇಟಿ ಪಡಾವೋ ಬೇಟಿ ಬಚಾವೋ, ಉತ್ತರ ಕನ್ನಡ- ಕದಂಬ ಬನವಾಸಿ ಮಧುಕೇಶ್ವರ ದೇವಸ್ಥಾನ, ವಿಜಯಪುರ- ವಚನ ಪಿತಾಮಹ ಫ.ಹು. ಹಳಕಟ್ಟಿ.

ಬೆಂಗಳೂರು ನಗರ- ಇಸ್ರೋ ಚಂದ್ರಯಾನ-2, ಬೆಂಗಳೂರು ಗ್ರಾಮಾಂತರ- ಸ್ವಚ್ಛತ ಕಡೆಗೆ ನಮ್ಮ ನಡಿಗೆ, ಚಿತ್ರದುರ್ಗ- ಹೆಣ್ಣು ಭ್ರೂಣ ಹತ್ಯೆ ತಡೆ ಹಾಗೂ ಮಹಿಳಾ ಸಾಧಕರು, ದಾವಣಗೆರೆ- ಏರ್‌ ಸ್ಟೆ್ರೖಕ್‌, ಕೋಲಾರ- ಅಂತರಗಂಗೆ, ಶಿವಮೊಗ್ಗ- ಫಿಟ್‌ ಇಂಡಿಯಾ, ತುಮಕೂರು- ಸಮಗ್ರ ಕೃಷಿ ಪದ್ಧತಿ ಹಾಗೂ ನಡೆದಾಡುವ ದೇವರು, ರಾಮನಗರ- ಮಳೂರು ಅಂಬೆಗಾಲು ಕೃಷ್ಣ, ಚಿಕ್ಕಬಳ್ಳಾಪುರ- ರೇಷ್ಮೆ ಮತ್ತು ಎಚ್‌. ನರಸಿಂಹಯ್ಯ, ಗುಲ್ಬರ್ಗಾ- ಆಯುಷ್ಮಾನ್‌ ಭಾರತ್‌.

ಬಳ್ಳಾರಿ- ಹಂಪಿ ವಾಸ್ತುಶಿಲ್ಪ ಕಲಾ ವೈಭವ, ಬೀದರ್‌- ಫಸಲ್‌ ಬೀಮಾ ಯೋಜನೆ, ಕೊಪ್ಪಳ- ಗವಿಸಿದ್ದೇಶ್ವರ ಬೆಟ್ಟ, ರಾಯಚೂರು- ಗೂಗಲ್‌ ಬ್ರಿಡ್ಜ್‌ , ಪ್ರಧಾನ ಮಂತ್ರಿ ಸಿಂಚಯಿ ಹಾಗೂ ನರೇಗಾ ಯೋಜನೆ, ಯಾದಗಿರಿ- ಅಂಬಿಗರ ಚೌಡಯ್ಯ, ಮೈಸೂರು- ಚಾಮರಾಜ ಒಡೆಯರ್‌ ಅವರ 100ನೇ ವರ್ಷದ ಸಾಧನೆ, ಚಾಮರಾಜನಗರ- ಸಮೃದ್ಧಿ ಸಂಪತ್ತಿನ ನಡುವೆ ಹುಲಿಯ ಸಂತೃಪ್ತ ತಾಣ, ಚಿಕ್ಕಮಗಳೂರು- ಶಿಶಿಲಬೆಟ್ಟ, ದಕ್ಷಿಣ ಕನ್ನಡ- ಮಂಗಳದೇವಿ ಹಾಗೂ ಭಾರತದ ದೊಡ್ಡ ಪೆಟ್ರೋಲಿಯಂ ಘಟಕ.

ಹಾಸನ- ಎತ್ತಿನಹೊಳೆ ಯೋಜನೆ, ಕೊಡಗು- ಗುಡ್ಡ ಕುಸಿತ ಜಾಗೃತಿ ಮೂಡಿಸುವ ಬಗ್ಗೆ, ಮಂಡ್ಯ- ಶ್ರೀ ಆದಿಚುಂಚನಗಿರಿ ಮಠ, ಉಡುಪಿ- ಶ್ರೀಕೃಷ್ಣ ಮಠದ ಗೋಪುರ, ದಸರಾ ಉಪ ಸಮಿತಿ- ಆನೆ ಬಂಡಿ, ಜೆಎಸ್‌ಎಸ್‌ ಮಠ, ಮೆಮೋ ರೈಲು, ಉಡಾನ್‌ ಮತ್ತು 10 ಪಥತದ ರಸ್ತೆ, ವಾರ್ತಾ ಇಲಾಖೆ- ಸರ್ಕಾರ ಸೌಲಭ್ಯಗಳ ಮಾಹಿತಿ, ಜಿಲ್ಲಾಡಳಿತ- ಸಾಮಾಜಿಕ ನ್ಯಾಯ, ಕಾವೇರಿ ನೀರಾವರಿ ನಿಗಮ- ನೀರಾವರಿ ನಿಗಮ ಮಾಹಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ- ಪೋಷಣ ಅಭಿಯಾನ, ರಕ್ತಹೀನತೆ ಮುಕ್ತ ಭಾರತ, ಪ್ರವಾಸೋದ್ಯಮ ಇಲಾಖೆ- ನಿಮ್ಮ ಸಾಹಸಗಾಥೆ ನೀವೇ ರಚಿಸಿ, ಮೈಸೂರು ವಿಶ್ವವಿದ್ಯಾನಿಲಯ- ವಿಶ್ವವಿದ್ಯಾನಿಲಯದ ಕಾರ್ಯಕ್ರಮಗಳು.

ಮೈಸೂರು: ಬೆಂಕಿ ಇಲ್ಲದೆ ರುಚಿಕರ ಅಡುಗೆ ಮಾಡಿದ ಅತ್ತೆ, ಸೊಸೆ..!

ಸ್ತಬ್ಧಚಿತ್ರ ಉಪಸಮಿತಿ ಉಪಾಧ್ಯಕ್ಷರಾದ ಅರುಣಕುಮಾರ್‌ಗೌಡ, ಲಕ್ಷ್ಮೀದೇವಿ, ನಂದಕುಮಾರ್‌, ಉಪ ವಿಶೇಷಾಧಿಕಾರಿ ಪದ್ಮಶೇಖರ್‌ ಪಾಂಡೆ, ಕಾರ್ಯಾಧ್ಯಕ್ಷ ಲಿಂಗರಾಜು, ಕಾರ್ಯದರ್ಶಿ ಸರಸ್ವತಿ, ಸದಸ್ಯರಾದ ಸೌಮ್ಯಶ್ರೀ, ಪ್ರವೀಣ್‌, ಹರೀಶ್‌ ಮೊದಲಾದವರು ಇದ್ದರು.

PREV
click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
ಬೆಂಗಳೂರು ಜನರಿಗೆ ಹೊಟ್ಟೆತುಂಬಾ ಬಿರಿಯಾನಿ ಬಾಡೂಟ ಕೊಟ್ಟ ಕುಟುಂಬ ಸಾಲದ ಸುಳಿಗೆ ಸಿಲುಕಿ ಆತ್ಮ*ಹತ್ಯೆ!