ಮನೆಯಲ್ಲಿ ದಾಸ್ತಾನಿರಿಸಿದ್ದ 51 ಕೆ.ಜಿ. ಆನೆ ದಂತ ಪತ್ತೆ

Published : Sep 19, 2019, 09:20 AM IST
ಮನೆಯಲ್ಲಿ ದಾಸ್ತಾನಿರಿಸಿದ್ದ 51 ಕೆ.ಜಿ. ಆನೆ ದಂತ ಪತ್ತೆ

ಸಾರಾಂಶ

ಬೆಳ್ತಂಗಡಿ ತಾಲೂಕಿನ ಸುರ್ಯ ರಸ್ತೆಯ ಮನೆಯೊಂದರಲ್ಲಿ ದಾಸ್ತಾನಿರಿಸಿದ್ದ ಸುಮಾರು 1 ಕೋಟಿ ರುಪಾಯಿಗೂ ಹೆಚಿನ ಮೌಲ್ಯದ 51 ಕೆ.ಜಿ. ಆನೆ ದಂತಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. 

ಬೆಳ್ತಂಗಡಿ [ಸೆ.19] : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸುರ್ಯ ರಸ್ತೆಯ ಮನೆಯೊಂದರಲ್ಲಿ ದಾಸ್ತಾನಿರಿಸಿದ್ದ ಸುಮಾರು 1 ಕೋಟಿ ರುಪಾಯಿಗೂ ಹೆಚಿನ ಮೌಲ್ಯದ 51 ಕೆ.ಜಿ. ಆನೆ ದಂತಗಳನ್ನು  ಪುತ್ತೂರು ಸಂಚಾರಿ ಅರಣ್ಯ ದಳ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದೆ. 

ಖಚಿತ ಮಾಹಿತಿ ಮೇರೆಗೆ ಸುರ್ಯ ಸಮೀಪದ ಮನೆಯೊಂದಕ್ಕೆ ದಾಳಿ ನಡೆಸಿ 51 ಕೆ.ಜಿ.ಯ 10 ಆನೆ ದಂತ ವಶಕ್ಕೆ ಪಡೆದಿದ್ದು ಅಬ್ರಾಹಂ, ಅನ್ವರ್‌, ಸುರೇಶ್‌ ಬಾಬು ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮತ್ತೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಕಳೆದ ಮೂರು ತಿಂಗಳಿಂದ ಆನೆ ದಂತ ದಾಸ್ತಾನು ಇರಿಸಿದ್ದು ಮಾತ್ರವಲ್ಲದೆ ಮಾರಾಟ ಜಾಲದ ಕುರಿತು ಇಲಾಖೆಗೆ ಲಭಿಸಿದ್ದ ಮಾಹಿತಿಯ ಆಧಾರದಲ್ಲಿ ದಾಳಿ ನಡೆಸಲಾಗಿತ್ತು.

PREV
click me!

Recommended Stories

ಆಸ್ತಿ ದಾಹಕ್ಕೆ ತಮ್ಮನ ನೆತ್ತರು ಹರಿಸಿದ ಅಣ್ಣ: ಹಸೆಮಣೆ ಏರಬೇಕಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಕಟುಕ ಸಹೋದರ!
ಕೇರಳದಿಂದ ಓದಲು ಬಂದು ಇಲ್ಲಿ ಬೇರೆಯದೇ ಕಾರುಬಾರು: ಕಾರಿನ ಬೆಲೆಗಿಂತಲೂ ದುಬಾರಿ ದಂಡ ವಿಧಿಸಿದ ಪೊಲೀಸರು