ಯಾದಗಿರಿ: ಮರಳು ತುಂಬಿದ್ದ ಲಾರಿ ಹರಿದು 51 ಕುರಿಗಳ ಸಾವು

Published : Dec 20, 2019, 10:05 AM IST
ಯಾದಗಿರಿ: ಮರಳು ತುಂಬಿದ್ದ ಲಾರಿ ಹರಿದು 51 ಕುರಿಗಳ ಸಾವು

ಸಾರಾಂಶ

ಲಾರಿ ಹರಿದು 51 ಕುರಿಗಳ ಸಾವು| ಸುರಪುರ ತಾಲೂಕಿನ ತಿಂಥಣಿ ಬ್ರೀಜ್ ಬಳಿ ನಡೆದ ಘಟನೆ|ಕುರಿಗಳನ್ನ ಸೇತುವೆ ದಾಟಿಸುತ್ತಿದ್ದಾಗ ನಡೆದ ದುರ್ಘಟನೆ| ಘಟನಾ ಸ್ಥಳಕ್ಕೆ ತಹಶೀಲ್ದಾರ್ ನಿಂಗಣ್ಣ ಬಿರಾದಾರ್ ಭೇಟಿ ಪರಿಶೀಲನೆ|

ಯಾದಗಿರಿ[ಡಿ.20]: ಮರಳು ಲಾರಿಯೊಂದು ಹರಿದ ಪರಿಣಾಮ 51 ಕುರಿಗಳ ಸಾವನ್ನಪ್ಪಿದ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬ್ರೀಜ್ ಬಳಿ ಘಟನೆ ಇಂದು[ಶುಕ್ರವಾರ] ನಡೆದಿದೆ. 

ಕುರಿಗಳನ್ನ ಸೇತುವೆ ದಾಟಿಸುತ್ತಿದ್ದಾಗ ವೇಗವಾಗಿ ಬಂದ ಲಾರಿ ಹರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸ್ಥಳದಲ್ಲಿ 51 ಕುರಿ ಮೃತಪಟ್ಟಿದ್ದು 15 ಕುರಿಗಳಿಗೆ ಗಾಯವಾಗಿದೆ. ಭೀಮಣ್ಣ ಹೊಸಮನಿ, ದ್ಯಾಮಣ್ಣ ಹೊಸಮನಿ ಎಂಬವವರಿಗೆ ಸೇರಿದ ಕುರಿಗಲಾಗಿವೆ. ಕುರಿಗಾಯಿಗಳು ಹುಣಸಗಿ ತಾಲೂಕಿನ ಕಮಲಾಪುರದಿಂದ ದೇವದುರ್ಗಕ್ಕೆ ತೆರಳುತ್ತಿದ್ದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಘಟನೆ ಬಳಿಕ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ನಿಂಗಣ್ಣ ಬಿರಾದಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

PREV
click me!

Recommended Stories

ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮಕ್ಕೆ ಇನ್ಮುಂದೆ ‘ಪರ್ಮಿಷನ್’ ಕಡ್ಡಾಯ! RSS ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹೊಸ ವಿಧೇಯಕ?
Health Minister Warns: ಚೀಸ್‌, ಪನ್ನೀರ್‌, ಬೆಣ್ಣೆ ಸೇರಿ ಯಾವುದೇ ಕೃತಕ ಆಹಾರ ಉತ್ಪನ್ನ ಬಳಸುವಂತಿಲ್ಲ: ಖಾದರ್‌ ಎಚ್ಚರಿಕೆ