ಬಾಗಲಕೋಟೆಯಲ್ಲಿ ಕೋಮುಗಲಭೆ: ಏಳು ಮಂದಿಗೆ ಗಾಯ

Published : Jun 22, 2023, 08:08 PM IST
ಬಾಗಲಕೋಟೆಯಲ್ಲಿ ಕೋಮುಗಲಭೆ: ಏಳು ಮಂದಿಗೆ ಗಾಯ

ಸಾರಾಂಶ

ಎರಡು ಮನೆಗಳ ಮೇಲೆ ಕಲ್ಲುತೂರಾಟ ನಡೆದಿದೆ. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಲಾಟೆ ವೇಳೆ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. 

ಬಾಗಲಕೋಟೆ(ಜೂ.22): ಬಾಗಲಕೋಟೆ ನವನಗರದಲ್ಲಿ ಬುಧವಾರ ತಡರಾತ್ರಿ ಎರಡು ಕೋಮುಗಳ ಯುವಕರ ನಡುವೆ ಗಲಾಟೆ ನಡೆದಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

ಎರಡು ಮನೆಗಳ ಮೇಲೆ ಕಲ್ಲುತೂರಾಟ ನಡೆದಿದೆ. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಲಾಟೆ ವೇಳೆ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾಸ್ಪತ್ರೆ ಎದುರು ಎರಡೂ ಕೋಮಿನ ಯುವಕರು ಜಮಾಯಿಸಿದ್ದಾರೆ. ಇದೇ ವೇಳೆ, ನಗರಸಭೆಯ ಮುಂದೆ ಹಿಂದೂ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದು, 12 ಗಂಟೆಯೊಳಗಾಗಿ ತಪ್ಪಿತಸ್ಥರನ್ನು ಬಂಧಿಸುವಂತೆ ಪೊಲೀಸರನ್ನು ಆಗ್ರಹಿಸಿದ್ದರು. 

ದುಡ್ಡು ಕೊಡುತ್ತೇವೆಂದರೂ ಅಕ್ಕಿ ಕೊಡುತ್ತಿಲ್ಲ: ಕೇಂದ್ರದ ವಿರುದ್ಧ ಹರಿಹಾಯ್ದ ಸಚಿವ ತಿಮ್ಮಾಪುರ

ಇದರಿಂದಾಗಿ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಗಲಾಟೆಗೆ ನಿಖರ ಕಾರಣ ಏನು ಎಂಬುದು ಗೊತ್ತಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿತ್ತು. 

PREV
Read more Articles on
click me!

Recommended Stories

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಸುಟ್ಟು ಕರಕಲಾದ ರೆನಾಲ್ಟ್ ಡಸ್ಟರ್ ಕಾರು!
ಕೇಂದ್ರ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ: ಸಂಸದ ಯದುವೀರ್