Covid Crisis: ಬೆಂಗಳೂರಿನಲ್ಲಿ ಮತ್ತೆ 700+ ಸೋಂಕು ಪಾಸಿಟಿವಿಟಿ ದರ ಶೇ.3.51ಕ್ಕೆ ಏರಿಕೆ

Published : Jun 19, 2022, 07:29 AM IST
Covid Crisis: ಬೆಂಗಳೂರಿನಲ್ಲಿ  ಮತ್ತೆ 700+ ಸೋಂಕು ಪಾಸಿಟಿವಿಟಿ ದರ ಶೇ.3.51ಕ್ಕೆ ಏರಿಕೆ

ಸಾರಾಂಶ

ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ 716 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಪಾಸಿಟಿವಿಟಿ ದರ ಶೇ.3.51ಕ್ಕೆ ಏರಿದೆ. 462 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸೋಂಕಿನಿಂದ ಮೃತಪಟ್ಟ ವರದಿಯಾಗಿಲ್ಲ.

ಬೆಂಗಳೂರು (ಜೂ.19): ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ 716 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಪಾಸಿಟಿವಿಟಿ ದರ ಶೇ.3.51ಕ್ಕೆ ಏರಿದೆ. 462 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸೋಂಕಿನಿಂದ ಮೃತಪಟ್ಟ ವರದಿಯಾಗಿಲ್ಲ. ನಗರದಲ್ಲಿ ಸದ್ಯ 4653 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ 36 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂಟು ಮಂದಿ ಐಸಿಯು ಮತ್ತು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದೆಲ್ಲರೂ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

24,553 ಮಂದಿ ಕೋವಿಡ್‌ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ. 3,989 ಮಂದಿ ಮೊದಲ ಡೋಸ್‌, 9,688 ಮಂದಿ ಎರಡನೇ ಡೋಸ್‌ ಮತ್ತು 10,909 ಮಂದಿ ಮೂರನೇ ಡೋಸ್‌ ಲಸಿಕೆ ಪಡೆದಿದ್ದಾರೆ. ನಗರದಲ್ಲಿ 17,153 ಮಂದಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 13,595 ಆರ್‌ಟಿಪಿಸಿಆರ್‌ ಹಾಗೂ 3,558 ಮಂದಿ ರಾರ‍ಯಪಿಡ್‌ ಆ್ಯಂಟಿಜನ್‌ ಪರೀಕ್ಷೆ ನಡೆಸಲಾಗಿದೆ.

ಕೋವಿಡ್‌ ಏರಿಕೆ: 13,216 ಕೇಸು, 113 ದಿನದ ಗರಿಷ್ಠ

ಶನಿವಾರ ಮಹದೇವಪುರ ವಲಯದಲ್ಲಿ ಹೊಸದಾಗಿ ನಾಲ್ಕು ಕಂಟೈನ್ಮೆಂಟ್‌ ವಲಯ ಸೃಷ್ಟಿಯಾಗಿವೆ. ಈ ಮೂಲಕ ಮಹದೇವಪುರದಲ್ಲಿ 23 ಪ್ರದೇಶಗಳು ಕಂಟೈನ್ಮೆಂಟ್‌ ವ್ಯಾಪ್ತಿಯಲ್ಲಿವೆ. ಉಳಿದಂತೆ ಯಲಹಂಕದಲ್ಲಿ 2 ಹಾಗೂ ದಾಸರಹಳ್ಳಿಯ ವಲಯದಲ್ಲಿ 2 ಸೇರಿದಂತೆ ಒಟ್ಟು 27 ಕಂಟೈನ್ಮೆಂಟ್‌ ವಲಯಗಳಿವೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

ಮತ್ತೆ ವಿಮಾನ ನಿಲ್ದಾಣಗಳಲ್ಲಿ ಕೋವಿಡ್‌ ಪರೀಕ್ಷೆ ಶುರು: ರಾಜ್ಯದಲ್ಲಿ ಕೊರೋನಾ ಹೆಚ್ಚಳಕ್ಕೆ ಕಾರಣ ಕಂಡುಕೊಳ್ಳಲು ವಿಮಾನ ನಿಲ್ದಾಣಗಳಲ್ಲಿ ಸೋಂಕು ಪರೀಕ್ಷೆ ನಡೆಸುವಂತೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ. ರಾಜ್ಯದಲ್ಲಿ ಸತತ 15 ದಿನ ಕೊರೋನಾ ಹೊಸ ಪ್ರಕರಣಗಳು ಹೆಚ್ಚಳವಾಗಿವೆ. ಕೊರೋನಾ ಮೂರನೇ ಅಲೆ ನಂತರ (ಒಮಿಕ್ರೋನ್‌ ಬಳಿಕ) ಯಾವುದೇ ಹೊಸ ತಳಿ ಪತ್ತೆಯಾಗಿಲ್ಲ. 

ಆದರೆ ಈ ಏರಿಕೆ ಏಕೆ ಎಂಬುದರ ಪತ್ತೆಗಾಗಿ ಅಂತಾರಾಷ್ಟ್ರೀಯ ಪ್ರಯಾಣಿಕರಲ್ಲಿ ಶೇ.2 ಲಕ್ಷಣ ರಹಿತರ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಬೇಕು. ವರದಿಯಲ್ಲಿ ಸೋಂಕು ದೃಢಪಟ್ಟರೆ ಆ ಮಾದರಿಯನ್ನು ಜಿನೋಮಿಕ್‌ ಸೀಕ್ಷೆನ್ಸಿಂಗ್‌ ಪರೀಕ್ಷೆಗೆ ಕಳುಹಿಸುವಂತೆ ಸೂಚಿಸಲಾಗಿದೆ. ಪ್ರತಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕು ಲಕ್ಷಣ ಇರುವವರನ್ನು ಪರೀಕ್ಷೆಗೆ ಒಳಪಡಿಸಿ ಸೋಂಕು ದೃಢಪಟ್ಟವರಲ್ಲಿ ಸಿಟಿ ವ್ಯಾಲ್ಯೂ 25ಕ್ಕಿಂತ ಕಡಿಮೆ ಇರುವ ಮಾದರಿಗಳನ್ನು ವಂಶವಾಹಿ ಪರೀಕ್ಷೆಗೆ ಕಳುಹಿಸಬೇಕು. 

ಕರ್ನಾಟಕದಲ್ಲಿ ಕೋವಿಡ್‌ ಮತ್ತಷ್ಟು ಹೆಚ್ಚಳ: 750 ಮಂದಿಗೆ ಸೋಂಕು

ಉಸಿರಾಟದ ತೊಂದರೆ (ಸಾರಿ) ಹಾಗೂ ವಿಷಮ ಶೀತಜ್ವರ (ಐಎಲ್‌ಐ) ಪ್ರಕರಣಗಳ ಮಾಹಿತಿಯನ್ನು ದಾಖಲಿಸಿ ಈ ಲಕ್ಷಣಗಳನ್ನು ಹೊಂದಿರುವ ಪ್ರತಿ 20 ಪ್ರಕರಣಗಳಲ್ಲಿ ಒಂದು ಮಾದರಿಯನ್ನು ಆರ್‌ಟಿಪಿಸಿಆರ್‌ ಪರೀಕ್ಷೆಗೆ ಒಳಪಡಿಸಬೇಕು. ಜತೆಗೆ ಆ ರೋಗಿಗಳ ಮೇಲೆ ನಿಗಾವಹಿಸಬೇಕು. ಪ್ರಯೋಗಾಲಯಗಳು ಪ್ರತಿನಿತ್ಯದ ಕೊರೋನಾ ಪರೀಕ್ಷೆಯ ವರದಿ ಮತ್ತು ಸಿಟಿ ವ್ಯಾಲ್ಯೂ ವಿಶ್ಲೇಷಿಸಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಪೋರ್ಚ್‌ಲ್‌ ನಲ್ಲಿ ದಾಖಲಿಸಬೇಕು ಎಂದು ಸೂಚಿಸಲಾಗಿದೆ.

PREV
Read more Articles on
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ