SC-ST ಗ್ರಾಹಕರಿಗೆ 75 ಯೂನಿಟ್ ವಿದ್ಯುತ್ ಉಚಿತ: ಸರ್ಕಾರದ ವಿನೂತನ ಯೋಜನೆ

Published : Jul 27, 2022, 07:48 PM IST
SC-ST ಗ್ರಾಹಕರಿಗೆ 75 ಯೂನಿಟ್ ವಿದ್ಯುತ್ ಉಚಿತ:  ಸರ್ಕಾರದ ವಿನೂತನ ಯೋಜನೆ

ಸಾರಾಂಶ

Free Power to SC ST in Karnataka: 3.78 ಲಕ್ಷಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬಗಳಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆಯನ್ನು ಸಿಎಂ ಬೊಮ್ಮಾಯಿ ನಾಳೆ ಉದ್ಘಾಟಿಸಲಿದ್ದಾರೆ.

ವರದಿ: ನಂದೀಶ್ ಮಲ್ಲೇನಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಬೆಂಗಳೂರು

ಬೆಂಗಳೂರು(ಜುಲೈ 27): ರಾಜ್ಯದ 3.78 ಲಕ್ಷಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬಗಳಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ವಿನೂತನ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಉದ್ಘಾಟಿಸಲಿದ್ದಾರೆ. ರಾಜ್ಯದ ಎಲ್ಲಾ ಗ್ರಾಮಾಂತರ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬಿಪಿಎಲ್ ಕಾರ್ಡ ಹೊಂದಿರುವ  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ನೀಡುವ ಯೋಜನೆ ಇದಾಗಿದೆ. 

ಯೋಜನೆ ಕುರಿತು ರಾಜ್ಯದ ಎಲ್ಲಾ ಎಸ್ಕಾಂಗಳು ಎಸ್ ಸಿ-ಎಸ್ ಟಿ ಗ್ರಾಹಕರಿಗೆ ಅರಿವು ಮೂಡಿಸಿದ್ದು ವಿದ್ಯುತ್ ಮೀಟರ್ ಮಾಪಕರು ಮತ್ತು ಗ್ರಾಮ ವಿದ್ಯುತ್ ಪ್ರತಿನಿಧಿಗಳು ಮನೆ ಮನೆಗೆ ತೆರಳಿ ಈ ಯೋಜನೆಯ ಕುರಿತು ಕರ ಪತ್ರಗಳನ್ನು ಹಂಚಿದ್ದಾರೆ. 

ಬೆಸ್ಕಾಂ, ಸೆಸ್ಕಾಂ, ಜೆಸ್ಕಾಂ, ಹೆಸ್ಕಾಂ ಮತ್ತು ಮೆಸ್ಕಾಂ ಕಂಪನಿಗಳು ಈಗಾಗಲೇ ಈ ಕುರಿತು ಅರಿವು ಮೂಡಿಸುವ  ಅಭಿಯಾನವನ್ನು ಆರಂಭಿಸಿದ್ದು, ಎಸ್ಸಿ ಎಸ್ಟಿ ಗ್ರಾಹಕರು ಯೋಜನೆ ಲಾಭ ಪಡೆಯಲು ಉತ್ಸುಕರಾಗಿದ್ದಾರೆ. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಾ. ಬಿ.ಆರ್ ಅಂಬೇಡ್ಕರ್ 115 ನೇ ಜಯಂತಿಯಂದು ಈ ಯೋಜನೆಯನ್ನು ಘೋಷಣೆ ಮಾಡಿದ್ದರು. ಈ ಯೋಜನೆ ಜುಲೈ ತಿಂಗಳಿಂದ ಬೆಸ್ಕಾಂನ 8 ಜಿಲ್ಲೆಯಲ್ಲಿ ಕಾರ್ಯಗತಗೊಂಡಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬಗಳು ತಾವು ಬಳಸುವ ವಿದ್ಯುತ್ ಪ್ರಮಾಣದಲ್ಲಿ 75 ಯೂನಿಟ್ ನವರೆಗೆ ಉಚಿತವಾಗಿ ಪಡೆಯಲಿದೆ.

ಎಸ್ಸಿ-ಎಸ್ಟಿ ಸಮುದಾಯ ಅಭಿವೃದ್ಧಿಗೆ 28000 ಕೋಟಿ: ಸಿಎಂ ಬೊಮ್ಮಾಯಿ

75 ಯೂನಿಟ್ ವರೆಗಿನ ವಿದ್ಯುತ್ ಶುಲ್ಕದ ಮೊತ್ತವನ್ನು ಎಸ್. ಸಿ-ಎಸ್.ಟಿ ಗ್ರಾಹಕರಿಗೆ ಡಿಬಿಟಿ ಮೂಲಕ ಸರ್ಕಾರ ಪಾವತಿಸಲಿದೆ. ಬಿಪಿಎಲ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಜಾತಿ ಪ್ರಮಾಣ ಪತ್ರವನ್ನು ಗ್ರಾಹಕರು ಒದಗಿಸಿ ಈ ಯೋಜನೆಯ ಲಾಭವನ್ನು  ಪಡೆಯಬಹುದಾಗಿದೆ. 

ಬೆಸ್ಕಾಂ ವ್ಯಾಪ್ತಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗ್ರಾಹಕರ ಸಂಖ್ಯೆ ಮತ್ತು ಅವರು ಪ್ರತಿ ತಿಂಗಳು ಬಳಸಿರುವ 75 ಯೂನಿಟ್ ಗೆ  ಸರ್ಕಾರದಿಂದ ಪಾವತಿಸಬೇಕಾದ ಸಬ್ಸಿಡಿ ಮೊತ್ತದ ಮಾಹಿತಿ ಕ್ರೋಡಿಕರಿಸಲು ಬೆಸ್ಕಾಂ ಸಾಫ್ಟ್ ವೇರ್ ಒಂದನ್ನುಅಭಿವೃದ್ದಿ ಪಡಿಸಿದೆ

PREV
Read more Articles on
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!